ಭಾರಿ ಮಳೆ, ಶಿವಮೊಗ್ಗದ ವಾಹನ ಸವಾರರನ್ನು ಮತ್ತೆ ಕಾಡುತ್ತಿವೆ ಗುಂಡಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭಾರಿ ಮಳೆ ಶಿವಮೊಗ್ಗ ನಗರದಲ್ಲಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಜೀವ ಭಯದಲ್ಲಿಯೇ ವಾಹನ ಚಲಾಯಿಸುವಂತೆ ಮಾಡಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ತೆಗೆದಿರುವ ಗುಂಡಿಗಳಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿವೆ.

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಪೈಪ್, ಕೇಬಲ್ ಅಳವಡಿಕೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಗುಂಡಿಗಳನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಗುಂಡಿ ಮುಚ್ಚಿದ್ದರೂ ಮಣ್ಣು ಸರಿಯಾಗಿ ಹಾಕಿಲ್ಲ. ಮಳೆ ಸುರಿಯುತ್ತಿದ್ದಂತೆ ವಾಹನ ಸವಾರರಿಗೆ ಈ ಗುಂಡಿಗಲು ದುಸ್ವಪ್ನದಂತೆ ಕಾಡಲು ಆರಂಭಿಸಿವೆ.

AVvXsEg7D64eppM2Y2YXBDC80Q2TdBmP2uvjR kzBF IPI

ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ತೆಗೆಯಲಾಗಿದ್ದ ಗುಂಡಿಯಲ್ಲಿ ಕಾರು ಸಿಲುಕಿದೆ. ಅದೃಷ್ಟವಶಾತ್ ಯಾವುದೆ ಸಮಸ್ಯೆಯಾಗಿಲ್ಲ.

ಶಿವಮೊಗ್ಗ ನಗರ ಪ್ರಮುಖ ರಸ್ತೆಗಳಾದ ಕುವೆಂಪು ರಸ್ತೆ, ಜೈಲ್ ರೋಡ್, ಬಾಲರಾಜ ಅರಸ್ ರಸ್ತೆ, ಸವಳಂಗ ರೋಡ್, ಎಎನ್’ಕೆ ರಸ್ತೆ, ಅಚ್ಚುತರಾವ್ ಲೇಔಟ್, ವೆಂಕಟೇಶ ನಗರ ಸೇರಿದಂತೆ ವಿವಿಧೆಡೆ ಗುಂಡಿ ಅಗೆಯಲಾಗಿದೆ. ಇಲ್ಲೆಲ್ಲ ಸವಾರರು ಆತಂಕದಲ್ಲೇ ವಾಹನ ಚಲಾಯಿಸುವಂತಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment