ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭಾರಿ ಮಳೆ ಶಿವಮೊಗ್ಗ ನಗರದಲ್ಲಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಜೀವ ಭಯದಲ್ಲಿಯೇ ವಾಹನ ಚಲಾಯಿಸುವಂತೆ ಮಾಡಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ತೆಗೆದಿರುವ ಗುಂಡಿಗಳಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿವೆ.
ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಪೈಪ್, ಕೇಬಲ್ ಅಳವಡಿಕೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಗುಂಡಿಗಳನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಗುಂಡಿ ಮುಚ್ಚಿದ್ದರೂ ಮಣ್ಣು ಸರಿಯಾಗಿ ಹಾಕಿಲ್ಲ. ಮಳೆ ಸುರಿಯುತ್ತಿದ್ದಂತೆ ವಾಹನ ಸವಾರರಿಗೆ ಈ ಗುಂಡಿಗಲು ದುಸ್ವಪ್ನದಂತೆ ಕಾಡಲು ಆರಂಭಿಸಿವೆ.
ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ತೆಗೆಯಲಾಗಿದ್ದ ಗುಂಡಿಯಲ್ಲಿ ಕಾರು ಸಿಲುಕಿದೆ. ಅದೃಷ್ಟವಶಾತ್ ಯಾವುದೆ ಸಮಸ್ಯೆಯಾಗಿಲ್ಲ.
ಶಿವಮೊಗ್ಗ ನಗರ ಪ್ರಮುಖ ರಸ್ತೆಗಳಾದ ಕುವೆಂಪು ರಸ್ತೆ, ಜೈಲ್ ರೋಡ್, ಬಾಲರಾಜ ಅರಸ್ ರಸ್ತೆ, ಸವಳಂಗ ರೋಡ್, ಎಎನ್’ಕೆ ರಸ್ತೆ, ಅಚ್ಚುತರಾವ್ ಲೇಔಟ್, ವೆಂಕಟೇಶ ನಗರ ಸೇರಿದಂತೆ ವಿವಿಧೆಡೆ ಗುಂಡಿ ಅಗೆಯಲಾಗಿದೆ. ಇಲ್ಲೆಲ್ಲ ಸವಾರರು ಆತಂಕದಲ್ಲೇ ವಾಹನ ಚಲಾಯಿಸುವಂತಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






