ಮಾರ್ಚ್‌ 1ರಂದು ಶಿವಮೊಗ್ಗ ತಾಲೂಕಿನ ಹಲವೆಡೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್‌ 1 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ಜಾತ್ರೆಯಿಂದ ರಾತ್ರಿ ಹಾರನಹಳ್ಳಿಯ ಮನೆಗೆ ಬಂದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?

Number 1 News Website in shimoga - Shivamogga Live
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 28, 2026 at 10:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 28, 2026

Leave a Comment