ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಯಲಿದೆ. ಆದ್ದರಿಂದ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್ಗಟ್ಟಲೆ ಮರಳು ವಶಕ್ಕೆ
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌಂಡ್, ಸೂಡಾ ಕಚೇರಿ, ದಯಾನಂದ ಪ್ರಿಂಟರ್ಸ್, ಸವಿ ಬೇಕರಿ ಹಾಗೂ ಸುತ್ತಮುತ್ತಲು ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಳಗ್ಗೆ 9 ರಿಂದ 6ರವರೆಗೆ ಕರೆಂಟ್ ಇರಲ್ಲ
ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200