ಜುಲೈ 31ರಂದು ಶಿವಮೊಗ್ಗ ಸಿಟಿಯ ವಿವಿಧೆಡೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ನಗರದ ವಿವಿಧೆಡೆ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಹಾಗೂ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 31 ರಂದು ಶಿವಮೊಗ್ಗ ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠ ಎಡಭಾಗ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ ಹಾಗೂ ಬಿ.ಎಚ್. ರಸ್ತೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕರೆಂಟ್‌ ಇರಲ್ಲ