‘ಶಿವಮೊಗ್ಗ ನಗರದಲ್ಲಿ ಆಗಿರುವ ನಷ್ಟಕ್ಕೆ ಸಚಿವ ಈಶ್ವರಪ್ಪ ಹೊಣೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಹರ್ಷ ಹತ್ಯೆ ಪ್ರಕರಣ ಮತ್ತು ಆ ಬಳಿಕ ನಡೆದ ಅಹಿತಕರ ಘಟನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಣೆ ಹೊರಬೇಕು. ನಗರದಲ್ಲಿ ಆಗಿರುವ ನಷ್ಟವನ್ನು ಅವರೆ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು.

Shimoga Nanjappa Hospital Covid Care center

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನಕುಮಾರ್ ಅವರು, ಜಿಲ್ಲೆಯ ಶಾಂತಿ ಸುವ್ಯವಸ್ಥೆ ಜೊತೆ ಸಚಿವ ಈಶ್ವರಪ್ಪ ಅವರು ಆಟವಾಡುತ್ತಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದಲೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ಅವರ ನಡೆ ಖಂಡನೀಯ. ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದವರು ಯಾರೂ ನಮ್ಮ ಜಿಲ್ಲೆಯವರಲ್ಲ ಎಂದು ಸಚಿವ ಈಶ್ವರಪ್ಪ ಅವರು  ಹೇಳಿಕೆ ನೀಡಿದ್ದಾರೆ. ಸಚಿವರಿಗೆ ಮೊದಲೇ ಮಾಹಿತಿ ಇದ್ದರೆ ಅದನ್ನು ಏಕೆ ಪೊಲೀಸ್ ಇಲಾಖೆಗೆ ತಿಳಿಸಲಿಲ್ಲ. ಅವರ ಹೇಳಿಕೆಗಳು ಕೂಡ ಪ್ರಚೋದನಕಾರಿಯಾಗಿವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆಗಳನ್ನು ನೀಡಬಾರದು ಎಂದರು.

ಹಿಂದೂಗಳ ರಕ್ಷಣೆಗೆ ನಮಗೆ ಮತ ನೀಡಿ ಎಂದು ಕೇಳಿಕೊಂಡಿದ್ದರು. ಈಗ ಅವರ ಜೊತೆಗಿದ್ದವರೆ ಹತ್ಯೆಯಾಗಿದ್ದಾರೆ. ಹರ್ಷನಿಗೆ ಜೀವ ಬೆದರಿಕೆ ಇತ್ತು ಎಂದು ಆತನ ತಾಯಿ ತಿಳಿಸಿದ್ದಾರೆ. ಆವರಿಗೆ ರಕ್ಷಣೆ ನೀಡಲು ಆಗಲಿಲ್ಲ ಎಂದ ಮೇಲೆ ನಾಗರಿಕರನ್ನು ಕಾಪಡಲು ಸಾದ್ಯವೆ ಎಂದು ಪ್ರಸನ್ನಕುಮಾರ್ ಅವರು ಪ್ರಶ್ನಿಸಿದರು.

ಹತ್ಯೆ ಮತ್ತು ಆನಂತರದ ಘಟನೆಗಳ ಸಂಬಂಧ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಸಚಿವ ಈಶ್ವರಪ್ಪ ಅವರೆ ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಅದು ಬಾಯಿ ಮಾತಿಗೆ ಸೀಮಿತವಾಗಬಾರದು. ಎಲ್ಲವೂ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರಕ್ಷದ ಪ್ರಮುಖರಾದ ದೀಪಕ್‌ ಸಿಂಗ್, ಶ್ಯಾಮ ಸುಂದರ್, ರಘು ಉಪಸ್ಥಿತರಿದ್ದರು.

ಇದನ್ನೂ ಓದಿ | ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ

Shimoga Live News Country Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment