ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಶಸ್ತ್ರ ಚಿಕಿತ್ಸೆಗೆ (Operation) ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಪ್ರಾರ್ಥಿಸಿ ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ ನೆರವೇರಿದವು.
» ಎಂ.ಶ್ರೀಕಾಂತ್ ಅಭಿಮಾನಿಗಳಿಂದ ಪೂಜೆ
ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಶೀಘ್ರ ಗುಣವಾಗಿ. ಅವರಿಗೆ ಆರೋಗ್ಯ, ಆಯಸ್ಸು ಕೊಟ್ಟು ಸಮಾಜದ ಸೇವೆಗೆ ಇನ್ನು ಹೆಚ್ಚಿನ ಅವಕಾಶ ಲಭಿಸಲಿ ಎಂದು ದೇವಿಗೆ ಹರಕೆ ಮಾಡಿದರು.

ಎಂ.ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ನವುಲೆ ಮಂಜು, ಮಹಾನಗರ ಪಾಲಿಕೆ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ, ಗ್ಯಾರಂಟಿ ಯೋಜನೆ ಸದಸ್ಯ ಬಸವರಾಜ್, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ವಿನಯ್, ಯುವ ಮುಖಂಡರಾದ ರಂಗನಾಥ್, ಶರತ್, ಮಂಜು ಪುರಲೆ, ಪ್ರದೀಪ್, ರಘು ಸಿಂಗ್, ಪ್ರದೀಪ್, ಹಾಲೇಶ್, ಪ್ರಸನ್ನ ಕುಮಾರ್, ಗುರು ಪ್ರಸಾದ್, ದರ್ಶನ್ ಸೇರಿದಂತೆ ಹಲವರು ಇದ್ದರು.

[su_note note_color=”#f1f1f1″ text_color=”#000000″ radius=”0″]
» ಸಿಗಂದೂರಿನಲ್ಲಿ ಮೃತ್ಯುಂಜಯ ಹೋಮ
ಅಮೆರಿಕದ ಮಿಯಾಮಿಯಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ ಎಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಮೃತ್ಯಂಜಯ ಹೋಮ ನಡೆಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಶಿವರಾಜ್ ಕುಮಾರ್ ಅವರ ಅಭಿಮಾನಿಗಳು ಹೋಮ ನಡೆಸಿದರು.

ದೇವಸ್ಥಾನದ ಕಾರ್ಯದರ್ಶಿ ರವಿ ಕುಮಾರ್, ಕೆಪಿಸಿಸಿ ಒಬಿಸಿ ಸಂಯೋಜಕ ಜಿ.ಡಿ.ಮಂಜುನಾಥ್, ಮಸ್ಗಾರ್ ರಾಜಪ್ಪ, ಎಂ.ಬಿ.ರವಿಕುಮಾರ್, ಪುರದಾಳು ರಘು, ಚೇತನ್, ಸಂದೇಶ್ ಸೇರಿದಂತೆ ಹಲವರು ಇದ್ದರು.[/su_note]
ಇದನ್ನೂ ಓದಿ » ಲಂಚ ಪಡೆದ ತಕ್ಷಣ ಲೋಕಾಯುಕ್ತರು ಪ್ರತ್ಯಕ್ಷ, ಅಧಿಕಾರಿ ಅರೆಸ್ಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















