SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಶಸ್ತ್ರ ಚಿಕಿತ್ಸೆಗೆ (Operation) ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಪ್ರಾರ್ಥಿಸಿ ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ ನೆರವೇರಿದವು.
» ಎಂ.ಶ್ರೀಕಾಂತ್ ಅಭಿಮಾನಿಗಳಿಂದ ಪೂಜೆ
ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಶೀಘ್ರ ಗುಣವಾಗಿ. ಅವರಿಗೆ ಆರೋಗ್ಯ, ಆಯಸ್ಸು ಕೊಟ್ಟು ಸಮಾಜದ ಸೇವೆಗೆ ಇನ್ನು ಹೆಚ್ಚಿನ ಅವಕಾಶ ಲಭಿಸಲಿ ಎಂದು ದೇವಿಗೆ ಹರಕೆ ಮಾಡಿದರು.
ಎಂ.ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ನವುಲೆ ಮಂಜು, ಮಹಾನಗರ ಪಾಲಿಕೆ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ, ಗ್ಯಾರಂಟಿ ಯೋಜನೆ ಸದಸ್ಯ ಬಸವರಾಜ್, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ವಿನಯ್, ಯುವ ಮುಖಂಡರಾದ ರಂಗನಾಥ್, ಶರತ್, ಮಂಜು ಪುರಲೆ, ಪ್ರದೀಪ್, ರಘು ಸಿಂಗ್, ಪ್ರದೀಪ್, ಹಾಲೇಶ್, ಪ್ರಸನ್ನ ಕುಮಾರ್, ಗುರು ಪ್ರಸಾದ್, ದರ್ಶನ್ ಸೇರಿದಂತೆ ಹಲವರು ಇದ್ದರು.
» ಸಿಗಂದೂರಿನಲ್ಲಿ ಮೃತ್ಯುಂಜಯ ಹೋಮ
ಅಮೆರಿಕದ ಮಿಯಾಮಿಯಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ ಎಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಮೃತ್ಯಂಜಯ ಹೋಮ ನಡೆಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಶಿವರಾಜ್ ಕುಮಾರ್ ಅವರ ಅಭಿಮಾನಿಗಳು ಹೋಮ ನಡೆಸಿದರು.
ದೇವಸ್ಥಾನದ ಕಾರ್ಯದರ್ಶಿ ರವಿ ಕುಮಾರ್, ಕೆಪಿಸಿಸಿ ಒಬಿಸಿ ಸಂಯೋಜಕ ಜಿ.ಡಿ.ಮಂಜುನಾಥ್, ಮಸ್ಗಾರ್ ರಾಜಪ್ಪ, ಎಂ.ಬಿ.ರವಿಕುಮಾರ್, ಪುರದಾಳು ರಘು, ಚೇತನ್, ಸಂದೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಲಂಚ ಪಡೆದ ತಕ್ಷಣ ಲೋಕಾಯುಕ್ತರು ಪ್ರತ್ಯಕ್ಷ, ಅಧಿಕಾರಿ ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200