SHIVAMOGGA LIVE NEWS | 5 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಪ್ರೀ ಪೇಡ್ ಆಟೋ ಕೌಂಟರ್ಗಳನ್ನು ತೆರೆಯಲು ಮತ್ತು ರೈಲ್ವೆ ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಕ್ಕೆ 20 ದಿನ ಗುಡುವು ನೀಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಇನ್ನು 20 ದಿನದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಪ್ರಿ ಪೇಡ್ ಆಟೋ ಕೌಂಟರ್ಗಳನ್ನು ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲ್ವೆ ನಿಲ್ದಾಣದಿಂದ ಬಸ್ ವ್ಯವಸ್ಥೆ
ಇನ್ನು, ರೈಲ್ವೆ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು. 20 ದಿನದೊಳಗೆ ಬಸ್ ಸಂಚಾರ ಆರಂಭಿಸಬೇಕು. ಬಸ್ ನಿಲುಗಡೆ ತಾಣದ ಕುರಿತು ಆರ್ಟಿಒ, ಆಟೋ ಚಾಲಕರ ಸಂಘ, ಸಂಚಾರ ಪೊಲೀಸರು, ಕೆಎಸ್ಆರ್ಟಿಸಿ ಅಧಿಕಾರಿಗಳು ಸರ್ವೆ ಮಾಡಿ ಸ್ಥಳ ನಿಗದಿಪಡಿಸಬೇಕು ಎಂದು ಸೂಚಿಸಿದರು.
ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಪ್ರಯಾಣಿಕರ ಅನುಕೂಲಕ್ಕೆ ಕೆಎಸ್ಆರ್ಟಿಸಿ ಬಸ್ ಅಗತ್ಯತೆ ಕುರಿತು ಶಿವಮೊಗ್ಗ ಲೈವ್ ಈ ಹಿಂದೆ ವರದಿ ಮಾಡಿತ್ತು. ಇದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇಲ್ಲಿದೆ ಆ ಲಿಂಕ್ – ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್, ರೈಲ್ವೆ ನಿಲ್ದಾಣಕ್ಕೆ ಯಾಕಿಲ್ಲ ಇಂತಹ ಸರ್ವಿಸ್?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






