ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೂರದ ಊರುಗಳಿಗೆ ತೆರಳಲು ಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗದಿಂದ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಬೆಂಗಳೂರು, ಮೈಸೂರಿಗೆ ಬಸ್
ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಪ್ರಮುಖ ಜಿಲ್ಲೆಗಳಿಗೆ ಶಿವಮೊಗ್ಗದಿಂದ ಬಸ್ ಬಿಡಲಾಗಿದೆ. ಸುಮಾರು 40 ಖಾಸಗಿ ಬಸ್ಗಳು ಬೆಳಗ್ಗೆಯಿಂದ ಪ್ರಯಾಣ ಆರಂಭಿಸಿವೆ. ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಆ ಭಾಗಕ್ಕೆ ಹೆಚ್ಚಿನ ಬಸ್ ಸೇವೆ ಇದೆ.
ಸರ್ಕಾರಿ ಬಸ್ಗಳ ಟಿಕೆಟ್ ದರದಲ್ಲಿಯೇ ಪ್ರಯಾಣಿಕರಿಗೆ ಚಾರ್ಜ್ ಮಾಡುತ್ತಿದ್ದೇವೆ ಅನ್ನುತ್ತಾರೆ ಬಸ್ ಕಂಡಕ್ಟರ್ಗಳು. ಕೆಎಸ್ಅರ್ಟಿಸಿ ಬಸ್ಗಳು ಸಂಚಾರ ನಿಂತಿರುವುದರಿಂದ ಸಂಕಷ್ಟದಲ್ಲಿರುವ ಪ್ರಯಾಣಿಕರು ಖಾಸಗಿ ಬಸ್ ಸೇವೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ. ತಮ್ಮೂರಿಗೆ ತಲುಪಲು ಅನುಕೂಲವಾಗುತ್ತಿದೆ.
ಬಸ್ ಸಂಚಾರದ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






