SHIVAMOGGA LIVE NEWS | 3 NOVEMBER 2023
SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ATNCC) ವಿದ್ಯಾರ್ಥಿಗಳು ನಗರದಲ್ಲಿ ಪಥ ಸಂಚಲನ (Procession) ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಸಾಗಿದ ವಿದ್ಯಾರ್ಥಿಗಳು ಕನ್ನಡ, ಕರ್ನಾಟಕದ ಹಿರಿಮೆ, ಭಾಷೆ ಬಳಕೆ ಕುರಿತು ಜಾಗೃತಿ ಮೂಡಿಸುವ ವಿವಿಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಎಟಿಎನ್ಸಿ ಕಾಲೇಜು ಆವರಣದಿಂದ ಕನ್ನಡ, ಕರ್ನಾಟಕದ ಪರ ಘೋಷಣೆ ಕೂಗುತ್ತ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತ, ಕರ್ನಾಟಕ ಸಂಘ, ಶಿವಪ್ಪನಾಯಕ ಪ್ರತಿಮೆ, ನೆಹರು ರಸ್ತೆ, ಗೋಪಿ ಸರ್ಕಲ್, ಮಹಾವೀರ ಸರ್ಕಲ್ ಮೂಲಕ ಎಟಿಎನ್ಸಿ ಕಾಲೇಜಿನವರೆಗೆ ಮೆರವಣಿಗೆ ನಡೆಸಲಾಯಿತು.
ಭುವನೇಶ್ವರಿಗೆ ನಮನ, ಸನ್ಮಾನ
ಇದಕ್ಕೂ ಮೊದಲು ಕಾಲೇಜು ಆವರಣದಲ್ಲಿ ಭುವನೇಶ್ವರಿಯ ದೊಡ್ಡ ಭಾವಚಿತ್ರಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ, ಎಟಿಎನ್ಸಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಪುಷ್ಪನಮನ ಸಲ್ಲಿಸಿದರು. ಬಳಿಕ ಚಂದನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘದ ಅಧ್ಯಕ್ಷ ಸುಂದರ ರಾಜ್ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಎನ್ಇಎಸ್ ಕಾರ್ಯದರ್ಶಿ ನಾಗರಾಜ್, ಪ್ರಾಂಶುಪಾಲರಾದ ಮಮತಾ, ಕನ್ನಡ ವಿಭಾಗದ ಉಪನ್ಯಾಸಕ ಪ್ರವೀಣ್.ಬಿ.ಎನ್, ಗಾಯತ್ರ.ಟಿ, ವಾಣಿಜ್ಯ ವಿಭಾಗದ ಗನಶ್ಯಾಮ್, ಸತಿಭಾರತಿ ದಯಾನಂದ್, ನಕ್ಷಾ, ನವೀನ್ ತೇಲ್ಕರ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.