ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭಾರತದ ಪ್ರಜೆಗಳಿಗೆ ಲಸಿಕೆ ಕೊಡುವ ಬದಲು ವಿದೇಶಗಳಿಗೆ ಲಸಿಕೆ ಹಂಚಿರುವ ಪ್ರಧಾನಿ ನರೇಂದ್ರ ಮೋದಿ ನಡೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.
ಶಿವಮೂರ್ತಿ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ‘ನಮ್ಮನ್ನು ಬಂಧಿಸಿ’ ಎಂದು ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ಲಸಿಕೆಗೆ ಆಗ್ರಹಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಂದ್ರ ಸರ್ಕಾರ ಬಂಧಿಸಿದೆ. ಇದೆ ಕಾರಣಕ್ಕೆ ನಾವೂ ಲಸಿಕೆಗಾಗಿ ಆಗ್ರಹಿಸುತ್ತೇವೆ, ನಮ್ಮನ್ನೂ ಬಂಧಿಸಿ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ಕಿರಣ್, ಲೋಕೇಶ್, ನಿತಿನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






