SHIMOGA NEWS, 24 SEPTEMBER 2024 : ಮೂಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ (Prosecution) ಹೈಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆ ತನಿಖೆಗೆ ಮುಕ್ತ ವಾತಾವರಣ ನಿರ್ಮಿಸಬೇಕಿದೆ. ಹಾಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಬಿ.ವೈ.ರಾಘವೇಂದ್ರ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ಕೋರ್ಟ್ನ ತೀರ್ಪು ಮತ್ತೆ ಸ್ಪಷ್ಟಪಡಿಸಿದೆ. ಒಳ್ಳೆ ರೀತಿಯ ತನಿಖೆ ಅಗಬೇಕಿದೆ. ಹಾಗಾಗಿ ಸಿಎಂ ಅವರು ದೂರ ಅಧಿಕಾರದಿಂದ ಉಳಿಯಬೇಕಾಗುತ್ತದೆ. ಕಾನೂನಿಗೆ ಗೌರವ ಕೊಡುವ ಕೆಲಸ ಅಗಬೇಕಿದೆ ಎಂದರು.
ಪ್ರಾಸಿಕ್ಯೂಷನ್ಗೆ ಅನುಮತಿ ಸಿಕ್ಕಿದೆ. ಇನ್ಮುಂದೆ ವಿಚಾರಣೆ ಆಗಲಿದೆ. ತಪ್ಪೋ, ಸರಿಯೋ ಅನ್ನುವುದು ಅಲ್ಲಿ ಗೊತ್ತಾಗಲಿದೆ. ಆರೋಪ ಮುಕ್ತವಾಗಿ ಬರಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇವೆ. ಆದರೆ ತನಿಖೆಗೆ ಮುಕ್ತ ವಾತಾವರಣ ನಿರ್ಮಿಸಬೇಕಿದೆ. ರಾಜೀನಾಮೆ ಕೊಟ್ಟು ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.
ಇದನ್ನೂ ಓದಿ » ಇತ್ತು ಸಂಜೆ ವೇಳೆಗೆ ಬ್ಯಾಂಕ್ ಖಾತೆಗೆ 25 ಲಕ್ಷ ರೂ. ಹಣ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200