SHIVAMOGGA LIVE NEWS | SHIMOGA | 27 ಜೂನ್ 2022
ಸುಳ್ಳು ಕೇಸುಗಳನ್ನು ಹಾಕಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದೆ (ARREST). ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬಂಧನಕ್ಕೆ ಆಕ್ರೋಶ
ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ಹತ್ಯಾಕಾಂಡದ ಬಲಿಪಶುಗಳ ಪರವಾಗಿ ನಿರಂತರ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಭಾರತದ ನ್ಯಾಯಪರತೆಯ ಸಾಕ್ಷಿಪ್ರಜ್ಞೆಯಾಗಿದ್ದಾರೆ. ಮಾನವಹಕ್ಕುಗಳ ದಮನದ ವಿರುದ್ಧ ರಾಜಿ ರಹಿತ ಹೋರಾಟ ನಡೆಸಿದ್ದಾರೆ. ನೊಂದವರ ಪರವಾಗ ದ್ವನಿ ಎತ್ತಿದ ಸಾಮಾಜಿಕ ಕಾರ್ಯಕರ್ತೆಯ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ, ಹೋರಾಟ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಒಕ್ಕೂಟದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. (ARREST)
ತೀಸ್ತಾ ಸೆಟಲ್ವಾಡ್ ಅವರ ವಿರುದ್ಧ ಸುಳ್ಳು ಕೇಸುಗಳನ್ನು ಹಿಂಪಡೆಯಬೇಕು. ಅವರನ್ನು ಜೈಲನಿಂದ ಬಿಡುಗಡೆ ಮಾಡಬೇಕು. ಈ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು ಎಂದು ಒಕ್ಕೂಟದ ಸದಸ್ಯರು ಆಗ್ರಹಿಸಿದರು.
ನಮ್ಮ ಹಕ್ಕು ವೇದಿಕೆಯ ಕೆ.ಪಿ.ಶ್ರೀಪಾಲ್, ಕರ್ನಾಟಕ ಜನಶಕ್ತಿ ಪಕ್ಷದ ಅನನ್ಯ ಶಿವು, ಚಿಂತಕ ಪ್ರೊ. ರಾಜೇಂದ್ರ ಚೆನ್ನಿ, ವಿಚಾರವಾದಿ ವೇದಿಕೆಯ ಆರ್.ಕುಮಾರ್, ಹುಸೇನ್, ಗಿರೀಶ್ ನಾಯ್ಕ ಬೆಳಲಕಟ್ಟೆ, ಸುರೇಶ್ ಅರಸಾಳು ಅವರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ – ತರಾತುರಿಯಲ್ಲಿ ಅಗ್ನಿಪಥ ಜಾರಿ, ಅಗ್ನಿವೀರರ ಭವಿಷ್ಯಕ್ಕಿಲ್ಲ ಭದ್ರ ಬುನಾದಿ, ಶಿವಮೊಗ್ಗದಲ್ಲಿ ಧರಣಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.