ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019
ನೆರೆ ಮತ್ತು ಬರ ಸಂತ್ರಸ್ಥ ರೈತರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ನವೆಂಬರ್ 7ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ರಾಜ್ಯದಲ್ಲಿ ನೆರೆಯಿಂದ ಸುಮಾರು 4394 ಗ್ರಾಮಗಳು ಮುಳುಗಡೆಯಾಗಿವೆ. 2.5 ಲಕ್ಷಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. 15 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಭೂ ಕುಸಿತದಿಂದ ಭೂಮಿಯೇ ಇಲ್ಲವಾಗಿದೆ. ಸರ್ವಸ್ವವನ್ನು ಕಳೆದುಕೊಂಡ ರೈತರು ಪರಿಹಾರಕ್ಕಾಗಿ ಹಂಬಲಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಇತ್ತ ಗಮನಹರಿಸದೇ ನಿರ್ಲಕ್ಷ್ಯ ಮನೋಭಾವನೆ ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ರಾಜ್ಯದ ರೈತರು, ಕೃಷಿ ಕಾರ್ಮಿಕರು, ಸಂತ್ರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ರೈತ ಸಂಘದ ಪ್ರಮುಖರಾದ ಕೆ.ರಾಘವೇಂದ್ರ, ಡಿ.ಹೆಚ್.ರಾಮಚಂದ್ರಪ್ಪ, ಪಿ.ಡಿ.ಮಂಜಪ್ಪ, ಎಸ್.ಶಿವಮೂರ್ತಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200