ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಏಕವಚನ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು, ಸಿದ್ದರಾಮಯ್ಯ ಅವರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. ತಕ್ಷಣ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ ಮಾತನಾಡಿ, ‘ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಸಿದ್ದರಾಮಯ್ಯ ಅವಹೇಳನ ಮಾಡಿದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಇದೇ ರೀತಿ ಮಾತನಾಡುತ್ತಾರಾ. ಹಿಂದೆ ರಾಷ್ಟ್ರಪತಿ ವಿರುದ್ಧವು ಸಿದ್ದರಾಮಯ್ಯ ಅವರು ಇದೇ ರೀತಿ ಏಕವಚನ ಪ್ರಯೋಗ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ, ಡಿ.ಎಸ್.ಅರುಣ್ಗೆ ಭರ್ಜರಿ ಗೆಲುವು
ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಮಾತನಾಡಿ, ‘ಅನುಭವ ರಾಜಕಾರಣಿ ಆಗಿರುವ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆ ನೀಡಿ ಅವರ ಮರ್ಯಾದೆಯನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಕಚ್ಚಾಟದಲ್ಲಿ ಸಿದ್ಧರಾಮಯ್ಯ ಸ್ಥಿಮಿತ ಕಳೆದುಕೊಂಡಿದ್ದಾರೆ. ವಿನಾಶಕಾಲ ವಿಪರೀತ ಬುದ್ದಿ ಎಂಬಂತಾಗಿದೆʼ ಎಂದು ಆರೋಪಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?
[su_quote cite=”ಸುಮಾ ಭೂಪಾಳಂ“]ಅಭಿವೃದ್ಧಿ ಶೂನ್ಯವಾಗಿರುವ ಸರ್ಕಾರ. ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಸಿದ್ದರಾಮಯ್ಯ ಅವರು ತಕ್ಷಣ ಕ್ಷಮಾಪಣೆ ಕೇಳುವುದು ಉತ್ತಮ[/su_quote]

[su_quote cite=”ಶಾಂತಾ ಸುರೇಂದ್ರ“]ಶಾಸಕರಿಗೆ ಅನುದಾನ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮಹಿಳೆಯರಿಗೆ ಪೂಜನೀಯ ಸ್ಥಾನ ನೀಡುತ್ತೇವೆ ಎಂದು ಭಾಷಣ ಮಾಡುವ ಕಾಂಗ್ರೆಸ್ ಮುಖಂಡರು ಈಗ ಏಕವಚನದ ನಿಂದನೆಗೆ ಏನಂತಾರೆ?[/su_quote]
ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಯಶೋದ ವೈಷ್ಣವ್, ನಿರ್ಮಲಾ, ನಾಗರಾಜ್, ಚಂದ್ರಶೇಖರ್.ಎಸ್, ಮಾಲ್ತೇಶ್ ಸೇರಿ ಹಲವರು ಇದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















