ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್ ಎಂದು ಖ್ಯಾತರಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಇದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೌನ ಪ್ರತಿಭಟನೆ ನಡೆಸಲಾಯಿತು.
ಕರೋನ ತಡೆಗೆ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಲಯಗಳೆ ಇದನ್ನು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಅವರು ಕರೋನ ಸೋಂಕಿತರಿಗೆ ನೆರವು ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದೆ ದೆಹಲಿ ಪೊಲೀಸರನ್ನು ಮುಂದೆ ಬಿಟ್ಟು, ವಿಚಾರಣೆ ನಡೆಲಾಗುತ್ತಿದೆ. ಇದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು, ಪೊಲೀಸರು ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪ್ರತಿಭಟನಾಕಾರರನ್ನು ತಡೆದರು. ಅದರೆ ಘೋಷಣೆ ಕೂಗುವುದಿಲ್ಲ, ಮೆರವಣಿಗೆ ನಡೆಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು. ಕೊನೆಗೆ ಮೌನ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕಾರ್ಪೊರೇಟರ್ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಮುಖಂಡರಾದ ಚೇತನ್ ಗೌಡ, ಮಧುಸೂದನ್, ದೀಪಕ್ ಸಿಂಗ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






