ಕೋಟೆ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ, ಕಾರಣವೇನು?

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ನಂತರ ನಡೆದ ಗಲಭೆ ಸಂಬಂಧ ಪೊಲೀಸರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಕೋಟೆ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಒಂದು ತಿಂಗಳ ಮೇಲೆ ಮೂರು ದಿನವಾಯ್ತು

ಕೋಟೆ ಠಾಣೆಯಲ್ಲಿ 10ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಗಲಭೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಭಜರಂಗದಳ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಕೋರರನ್ನು ಬಂಧಿಸದೆ, ಹಿಂದೂ ಸಂಘಟನೆ ಕಾರ್ಯಕರ್ತರ ವಿಚಾರಣೆ ನಡೆಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಠಾಣೆ ಎದುರು ಧರಣಿ, ಘೋಷಣೆ

ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕೋಟೆ ಠಾಣೆ ಮುಂಭಾಗ ಧರಣಿ ನಡೆಸಲಾಗುತ್ತಿದೆ. ಮಾಜಿ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ, ಭಜರಂಗದಳ ಮುಖಂಡ ದೀನದಯಾಳು ನೇತೃತ್ವದಲ್ಲಿ ಪ್ರತಿಭಟನೆ ನೆಡಸಲಾಗುತ್ತಿದೆ.

ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

060121 Bajarangadal Workers Protest in Shimoga 1

Leave a Comment