ಮಧುಗಿರಿ ಮೋದಿ ಬಂಧನಕ್ಕೆ ಶಿವಮೊಗ್ಗದಲ್ಲಿ ಒತ್ತಾಯ, ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020

86411828 808553639624548 4002031134635458560 n.jpg? nc cat=106& nc ohc=yTVcWdhz90IAX9p42YM& nc ht=scontent.fblr11 1

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರಿಗೆ ಅವಾಚ್ಯ ಶಬ್ದ ಬಳಸಿ ಅಗೌರವ ತೋರಿದ ಉಲ್ಲಾಳದ ಮಧುಗಿರಿ ಮೋದಿ ಎಂಬಾತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಸುನ್ನಿ ಜಾಮಿಯಾ ಮಸ್ಜಿದ್ ಸುನ್ನಿ ಜಮೈತುಲ್ ಉಲ್ಮ ಕಮಿಟಿ ವತಿಯಿಂದ ಪ್ರತಿಭಟನ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಮಿಟಿ ಸದಸ್ಯರು, ಮಧುಗಿರಿ ಮೋದಿ ಎಂಬಾತ ಫೇಸ್’ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಅವರ ಕುರಿತು ಅವಾಚ್ಯ ಶಬ್ದಗಳನ್ನು ಬಳಿಸಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಕಮಿಟಿ ಸದಸ್ಯರು ಮನವಿ ಸಲ್ಲಿಸಿದರು. ಇದಕ್ಕು ಮೊದಲು ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.

ಕಮಿಟಿಯ ಅಧ್ಯಕ್ಷ ಸತ್ತಾರ್ ಬೇಗ್, ಕಾರ್ಯದರ್ಶಿ ಏಜಾಜ್ ಪಾಷ, ಜಾಮಿಯ ಮಸೀದಿ ಮುಖಂಡರಾದ ಅಫ್ತಾಬ್ ಪರ್ವಿಜ್, ವಕೀಲರಾದ ಸೈಯದ್ ಲಿಯಾಖತ್, ನಯಾಜ್ ಅಹ್ಮದ್ ಖಾನ್, ಮುನಾವರ್ ಪಾಷಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

86383322 807422986404280 829757410657697792 o.jpg? nc cat=105& nc ohc=sTuCziJ1DTkAX8BjYSL& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment