ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 13 AUGUST 2024 : ಮೈಕ್ರೋ ಫೈನಾನ್ಸ್ಗಳು (Micro Finance) ಜಿಲ್ಲೆಯ ಬಡ ಮಹಿಳೆಯರನ್ನು ಶೋಷಣೆ ಮಾಡುತ್ತಿವೆ. ಈ ಹಿನ್ನೆಲೆ ಮೈಕ್ರೋ ಫೈನಾನ್ಸ್ಗಳ ಸಭೆ ಕರೆದು ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ಗಳಿವೆ. ಈ ಪೈಕಿ ಬಹುತೇಕ ಸಂಸ್ಥೆಗಳು ಆರ್ಬಿಐನ ನಿಯಮ ಪಾಲಿಸದೆ ಮನಬಂದಂತೆ ಕಾರ್ಯ ನಿರ್ವಹಿಸುತ್ತಿವೆ. ಬಡ ಮಹಿಳೆಯರಿಗೆ ಸಾಲ ನೀಡಿದ ನಂತರ ಸಾಲ ವಸೂಲಿ ನೆಪದಲ್ಲಿ ಮಹಿಳೆಯರ ಮನೆಗಳಿಗೆ ತೆರಳಿ ಮಾನಸಿಕ ಹಿಂಸೆ ನೀಡುತ್ತಿವೆ. ಸಾಲ ಮರುಪಾವತಿ ಮಾಡುವವರೆಗೂ ಸಂಸ್ಥೆಯ ಸಿಬ್ಬಂದಿ ಸಾಲಗಾರರ ಮನೆಯಲ್ಲೇ ಕುಳಿತು ಕಿರಿಕಿರಿ ಮಾಡುತ್ತಾರೆ ಎಂದು ದೂರಿದರು.
ಇದನ್ನೂ ಓದಿ ⇒ ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?
ಆರ್ಬಿಐ ನಿಯಮಾನುಸಾರ ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಸಾಲ ವಸೂಲು ಮಾಡಬೇಕು. ಆದರೆ ನಿಯಮ ಮೀರಿ ವರ್ತಿಸುವ ಸಿಬ್ಬಂದಿ ಸಾಲಗಾರರ ಮೇಲೆ ಮನಬಂದಂತೆ ವಾಗ್ದಾಳಿ ನಡೆಸುತ್ತಾರೆ. ಹಗಲು-ರಾತ್ರಿ ಎನ್ನದೆ ಸಾಲ ವಸೂಲಿ ಮಾಡುತ್ತಾರೆ. ಕೂಡಲೇ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಜಿಲ್ಲಾಧಿಕಾರಿ ಮೈಕ್ರೋ ಫೈನಾನ್ಸ್ ಮುಖ್ಯಸ್ಥರ ಸಭೆ ಕರೆದು ಸೂಕ್ತ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್ ರೋಪ್
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





