SHIMOGA, 13 AUGUST 2024 : ಮೈಕ್ರೋ ಫೈನಾನ್ಸ್ಗಳು (Micro Finance) ಜಿಲ್ಲೆಯ ಬಡ ಮಹಿಳೆಯರನ್ನು ಶೋಷಣೆ ಮಾಡುತ್ತಿವೆ. ಈ ಹಿನ್ನೆಲೆ ಮೈಕ್ರೋ ಫೈನಾನ್ಸ್ಗಳ ಸಭೆ ಕರೆದು ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ಗಳಿವೆ. ಈ ಪೈಕಿ ಬಹುತೇಕ ಸಂಸ್ಥೆಗಳು ಆರ್ಬಿಐನ ನಿಯಮ ಪಾಲಿಸದೆ ಮನಬಂದಂತೆ ಕಾರ್ಯ ನಿರ್ವಹಿಸುತ್ತಿವೆ. ಬಡ ಮಹಿಳೆಯರಿಗೆ ಸಾಲ ನೀಡಿದ ನಂತರ ಸಾಲ ವಸೂಲಿ ನೆಪದಲ್ಲಿ ಮಹಿಳೆಯರ ಮನೆಗಳಿಗೆ ತೆರಳಿ ಮಾನಸಿಕ ಹಿಂಸೆ ನೀಡುತ್ತಿವೆ. ಸಾಲ ಮರುಪಾವತಿ ಮಾಡುವವರೆಗೂ ಸಂಸ್ಥೆಯ ಸಿಬ್ಬಂದಿ ಸಾಲಗಾರರ ಮನೆಯಲ್ಲೇ ಕುಳಿತು ಕಿರಿಕಿರಿ ಮಾಡುತ್ತಾರೆ ಎಂದು ದೂರಿದರು.
ಇದನ್ನೂ ಓದಿ ⇒ ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?
ಆರ್ಬಿಐ ನಿಯಮಾನುಸಾರ ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಸಾಲ ವಸೂಲು ಮಾಡಬೇಕು. ಆದರೆ ನಿಯಮ ಮೀರಿ ವರ್ತಿಸುವ ಸಿಬ್ಬಂದಿ ಸಾಲಗಾರರ ಮೇಲೆ ಮನಬಂದಂತೆ ವಾಗ್ದಾಳಿ ನಡೆಸುತ್ತಾರೆ. ಹಗಲು-ರಾತ್ರಿ ಎನ್ನದೆ ಸಾಲ ವಸೂಲಿ ಮಾಡುತ್ತಾರೆ. ಕೂಡಲೇ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಜಿಲ್ಲಾಧಿಕಾರಿ ಮೈಕ್ರೋ ಫೈನಾನ್ಸ್ ಮುಖ್ಯಸ್ಥರ ಸಭೆ ಕರೆದು ಸೂಕ್ತ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್ ರೋಪ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200