SHIVAMOGGA LIVE NEWS | 20 JUNE 2024
SHIMOGA : ಪೆಟ್ರೋಲ್, ಡಿಸೇಲ್ ದರ ಏರಿಕೆ (Price) ಖಂಡಿಸಿ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಶಾಸಕ ಚನ್ನಬಸಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಗ್ಯಾರಂಟಿ ಆಶ್ವಾಸನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು ತಿಂಗಳಿಂದ ಗ್ಯಾರಂಟಿ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಈಗ ಪೆಟ್ರೊಲ್, ಡಿಸೆಲ್ ದರ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಶೋಕ ಸರ್ಕಲ್ನಲ್ಲಿ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರನ್ನು ವಶಪಡಿಸಿಕೊಂಡಿರು.
ಪ್ರಮುಖರಾದ ಎಸ್.ಜ್ಞಾನೇಶ್ವರ್, ಅನಿತಾ ರವಿಶಂಕರ್, ಸುರೇಖಾ ಮುರಳೀಧರ್, ರಾಹುಲ್ ಬಿದರೆ, ಮಾಲತೇಶ್, ಮಂಜುನಾಥ್, ವಿಶ್ವನಾಥ್, ದಿನೇಶ್, ಕಿರಣ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟ ದರ್ಶನ್ ವಿರುದ್ಧ ಆಕ್ರೋಶ, ವೀರಶೈವ ಸಮಾಜದಿಂದ ಹೋರಾಟ, ಯಾರೆಲ್ಲ ಏನೇನು ಹೇಳಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200