ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 6 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ರಾಜಕೀಯ ಪ್ರೇರಿತ (Politically Motivated) ಎಂದು ಆರೋಪಿಸಿ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜನಪರ ಹೋರಾಟ ಸಮಿತಿ ಕಾರ್ಯಕರ್ತರು, ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ವರ್ಚಸ್ಸು ಸಹಿಸದೆ ಬಿಜೆಪಿ ನಾಯಕರು ದುರುದ್ದೇಶದಿಂದ ವಿವಿಧ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆಪಾದಿಸಿದರು.

ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಈ ಹಿಂದೆ ಸಿಒಡಿ ತನಿಖೆ ನಡೆಸಲಾಗಿತ್ತು. ಅವ್ಯವಹಾರದಲ್ಲಿ ಆರ್‌.ಎಂ.ಮಂಜುನಾಥಗೌಡ ಪಾತ್ರವಿಲ್ಲ ಎಂದು ಸಿಒಡಿ ಅಧಿಕಾರಿಗಳು ಕ್ಲೀನ್‌ ಚಿಟ್‌ ನೀಡಿದ್ದರು. ಹಾಗಿದ್ದೂ ಈಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿ ಎಂದು ಆಪಾದಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ – ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment