SHIMOGA NEWS, 12 NOVEMBER 2024 : ಹಳ್ಳಗುಂಡಿಗಳಿಂದ ಹದಗೆಟ್ಟ ರಸ್ತೆ, ಧೂಳುಮಯ ವಾತಾವರಣ, ಕಂಗೆಟ್ಟ ಜನರು ಇವತ್ತು ರಸ್ತೆ ತಡೆ ಮಾಡಿ ಪ್ರತಿಭಟನೆ (PROTEST) ನಡೆಸಿದರು. ಹೊನ್ನಾಳಿ ರಸ್ತೆಯಲ್ಲಿರುವ ಶಿವಮೊಗ್ಗ ರೈಲ್ವೆ ಮೇಲ್ಸೇತುವೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಶೇಷಾದ್ರಿಪುರಂ ರೈಲ್ವೆ ಮೇಲ್ಸೇತುವೆ ಮತ್ತು ರಾಗಿಗುಡ್ಡಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸವಾರರು ವಾಹನ ಚಲಾಯಿಸಲು ಹರಸಾಹಸ ಪಡಬೇಕಾಗಿದೆ. ಸ್ಥಳೀಯರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಧೂಳಿನಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶಿವಮೊಗ್ಗ – ಹೊನ್ನಾಳಿ ಹೆದ್ದಾರಿ ತಡೆದು ಸ್ಥಳೀಯರು ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್
ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರತಿಭಟನಾಕಾರರ ಮನವಿ ಆಲಿಸಿದರು. ಅಲ್ಲದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕೂಡಲೆ ರಸ್ತೆ ರಿಪೇರಿ ಮಾಡಿಸುವಂತೆ ಸೂಚನೆ ನೀಡಿದರು.
ಪ್ರಮುಖರಾದ ಎಸ್.ಎಂ.ಮಧುಸೂದನ್, ಎಂ.ರವಿಪ್ರಸಾದ್, ನಯಾಜ್, ಕಿಶೋರ್, ನೂರುಲ್ಲಾ, ರಘು, ಅನಿಲ್ ಕುಮಾರ್, ಶರತ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಸಿಗಂದೂರು ಲಾಂಚ್, ಹೊಳೆಬಾಗಿಲಲ್ಲಿ ರೈತರಿಂದ ಪ್ರತಿಭಟನೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200