ಶಿವಮೊಗ್ಗ: ಆಪರೇಷನ್ ಸಿಂಧೂರ ಸಂದರ್ಭ ಪಾಕಿಸ್ತಾನಕ್ಕೆ ಡ್ರೋಣ್ ಪೂರೈಕೆ ಮಾಡಿದ ಟರ್ಕಿ ದೇಶದ ಕ್ರಮ ಖಂಡಿಸಿ, ಟರ್ಕಿ ಆ್ಯಪಲ್ಗಳಿಗೆ (Turkey Apple) ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿ ಟರ್ಕಿ ಆಪಲ್ಗಳನ್ನು ಸುಡಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಪರೇಷನ್ ಸಿಂಧೂರದ ಸಂದರ್ಭ ಪಾಕಿಸ್ತಾನಕ್ಕೆ ಟರ್ಕಿ ದೇಶ ಬೆಂಬಲವಾಗಿತ್ತು. ಪಾಕಿಸ್ತಾನಕ್ಕೆ ನೂರಾರು ಡ್ರೋಣ್ಗಳನ್ನು ಪೂರೈಕೆ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಇದನ್ನು ಖಂಡಿಸಿ ಟರ್ಕಿ ದೇಶದಿಂದ ಆಮದಾಗಿರುವ ಸೇಬು ಹಣ್ಣುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಯಿತು.

ಪ್ರಾಕೃತಿಕ ವಿಕೋಪದ ಸಂದರ್ಭ ಟರ್ಕಿ ದೇಶಕ್ಕೆ ಭಾರತ ನೆರವು ನೀಡಿತ್ತು. ನಮ್ಮ ದೇಶದಿಂದ ನೆರವು ಪಡೆದು ಈಗ ಟರ್ಕಿ ದೇಶ ವಂಚನೆ ಮಾಡಿದೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಪ್ರಮುಖರಾದ ಕಲ್ಲೂರು ಮೇಘರಾಜ್, ಹೆಚ್.ಎಂ.ಸಂಗಯ್ಯ, ಶಂಕ್ರನಾಯ್ಕ, ಕೆ.ಆರ್.ಶಿವಣ್ಣ, ಸೋಮಶೇಖರಯ್ಯ, ಟಿ.ಹೆಚ್.ಬಾಬು, ಗೋಪಲ್ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದ ಸೀಟುಗಳು ಲಭ್ಯ




LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





