Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ?

ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ?

03/05/2025 7:17 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ವಕ್ಫ್‌ ತಿದ್ದುಪಡಿ ಕಾಯ್ದೆ (Act) ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯ ಜನರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಜಿಲ್ಲಾ ವಕ್ಫ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆಯ ಹೈಲೈಟ್ಸ್‌

  • ಶಿವಮೊಗ್ಗ ಮತ್ತು ಸುತ್ತಮುತ್ತಲ ತಾಲೂಕುಗಳಿಂದ ದೊಡ್ಡ ಸಂಖ್ಯೆಯ ಮುಸ್ಲಿಮರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕಪ್ಪುಪಟ್ಟಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. 

Protest Against Waqf act amendment

  • ರಾಷ್ಟ್ರಧ್ವಜ ಹಿಡಿದುಕೊಂಡು, ವಕ್ಫ್‌ ಕಾಯ್ದೆ ವಿರುದ್ಧದ ಘೋಷಣೆ ಇರುವ ಫ್ಲೇಕರ್‌ಗಳನ್ನು ಪ್ರದರ್ಶಿಸುತ್ತ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
  • ಮೆರವಣಿಗೆಯಲ್ಲಿ ಸಾವಿರಾರು ಮುಂದಿ ಭಾಗವಹಿಸಿದ್ದರಿಂದ ಕುವೆಂಪು ರಂಗಮಂದಿರ ಮುಂಭಾಗದ ರಸ್ತೆ ಸಂಪೂರ್ಣ ಬಂದ್‌ ಆಗಿತ್ತು.

Arya-PU-College-Shimoga.

  • ಮೆರವಣಿಗೆ ಆರಂಭಕ್ಕು ಮುನ್ನ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
  • ಪ್ರತಿಭಟನಾ ಮೆರವಣಿಗೆಯ ನಿರ್ವಹಣೆಗೆ ಸಂಘಟನೆಯ ವತಿಯಿಂದ ಸ್ವಯಂ ಸೇವಕರನ್ನು ನಿಯೋಜನೆ ಮಾಡಲಾಗಿತ್ತು.

Protest Against Waqf act amendment

  • ಪ್ರತಿಭಟನಾ ಸಭೆ ಆರಂಭಕ್ಕು ಮುನ್ನ ಪಹಲ್ಗಾಮ್‌ ದಾಳಿಯಲ್ಲಿ ಸಾವನ್ನಪ್ಪಿದರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಓದಲಾಯಿತು.

ಸಭೆಯಲ್ಲಿ ಯಾರೆಲ್ಲ ಏನೆಲ್ಲ ಹೇಳಿದರು?

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ವಕ್ಫ್‌ ಬೋರ್ಡ್‌ನಲ್ಲಿ ಹಿಂದುಗಳಿರಬೇಕು ಎಂದು ತಿಳಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ. ಇನ್ನು, 20 ಅಥವಾ 30 ವರ್ಷದಿಂದ ವಕ್ಫ್‌ ಆಸ್ತಿ ಬಳಸಿಕೊಳ್ಳುತ್ತಿದ್ದರೆ ಅದು ಅವರದೆ ಸ್ವತ್ತಾಗಲಿದೆ ಎಂದು ತಿದ್ದುಪಡಿ ಮಾಡಲಾಗಿದೆ. ಅಲ್ಲಾಹುವಿನ ಆಸ್ತಿ ಯಾರಿಗು ಸೇರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಮನದಟ್ಟಾಗಬೇಕಿದೆ.

– ಶಾಹುಲ್‌ ಹಮೀದ್‌ ಮುಸ್ಲಿಯಾರ್‌, ಎಸ್‌ವೈಒ ಕಾರ್ಯದರ್ಶಿ

m3

ನಮ್ಮ ದೇಶದ ಗಡಿ ರಕ್ಷಣೆ ಮಾಡಲು ಸಾಧ್ಯವಿಲ್ಲದ ನೀವು ನಮ್ಮ ವಕ್ಫ್‌ ರಕ್ಷಣೆ ಮಾಡುತ್ತೀರಿ ಎಂಬ ನಂಬಿಕೆ ಇಲ್ಲ. ವಕ್ಫ್‌ ಆಸ್ತಿಯನ್ನು‌ ನಾವೆ ರಕ್ಷಣೆ ಮಾಡಿಕೊಳ್ಳುತ್ತೇವೆ. ಆದ್ದರಿಂದ ವಕ್ಫ್‌ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆಯಿರಿ.

– ಮೌಲ್ವಿ ಮುಫ್ತಿ ಅಖ್ವಿಲ್‌ ರಝಾ, ಜಾಮಿಯಾ ಮಸೀದಿ

Protest Against Waqf act amendment

ವಕ್ಫ್ ಆಸ್ತಿಗೂ ಅಮಿತ್ ಷಾಗೂ ಏನು ಸಂಬಂಧ? ವಕ್ಫ್ ಆಸ್ತಿ ಭಗವಂತನಿಗೆ ಸೇರಿದ್ದು. ಅದು ಯಾರ ಒಡೆತನದಲ್ಲಿ ಇರುವುದಿಲ್ಲ. 1953, 1995, 2013ರಲ್ಲಿ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಆಗ ಯಾವುದೇ ಸಮಸ್ಯೆ ಆಗಿರಲಿಲ್ಲ. ಮೋದಿ, ಅಮಿತ್ ಷಾ ಅವಧಿಯಲ್ಲಿ ತಿದ್ದುಪಡಿ ತಂದಾಗ ವಿರೋಧ ವ್ಯಕ್ತವಾಗುತ್ತಿದೆ. ಇವರು ಒಡೆದು ಆಳುವ ನೀತಿ ಮಾಡುತ್ತಿದ್ದಾರೆ.

– ಸುಧೀರ್‌ ಕುಮಾರ್‌ ಮುರೊಳ್ಳಿ, ಎಬಿಸಿಆರ್‌ ರಾಜ್ಯಾಧ್ಯಕ್ಷ

Protest Against Waqf act amendment

ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಮುಖರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಾರ್ಕಜಿ ಸುನ್ನೀ ಜಮೀಯತ್‌ ಮಸೀದಿಯ ಉಪಾಧ್ಯಕ್ಷ ಮೊಹಮ್ಮದ್‌ ಇರ್ಫಾನ್‌ ಖಾನ್‌, ಸುನ್ನಿ ಜಮಾತ್‌ ಉಲಮಾ ಕಮಿಟಿ ಕಾರ್ಯದರ್ಶಿ ಐಜಾಜ್‌ ಪಾಷಾ, ಮಝಹರ್‌ ಉಲ್‌ ಉಲೂಮ್‌ನ ಮುಫ್ತಿ‌ ಸಯ್ಯದ್ ಮಜೀಬುಲ್ಲಾ, ಆಲ್‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ನ ಮುಫ್ತಿ ಮೊಹಮ್ಮದ್‌ ಸಫಿಯುಲ್ಲಾ ಖಾಸ್ಮಿ, ಜಮಾತ್‌ ಅಹ್ಲೆ ಹದೀಸ್‌ನ ಶೇಖ್‌ ಅಲಿ, ಜಮಾತ್‌ ಇಸ್ಲಾಮಿ ಹಿಂದ್‌ನ ಶಿವಮೊಗ್ಗದ ಕಾರ್ಯದರ್ಶಿ ಮೌಲಾನಾ ಹಾಮಿದ್‌ ಉಮರಿ, ಮರ್ಕಝ್‌ ಸಆದನ ಪ್ರಾಂಶುಪಾಲ ಮೌಲಾನಾ ಅಬ್ದುಲ್‌ ಜಬ್ಬಾರ್‌ ಸಾದಿ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು ಸೇರಿದಂತೆ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬೆಳಗ್ಗೆ ಅಪಘಾತ, ಅದೃಷ್ಟವಶಾತ್‌ ಪರಾದ ಇಬ್ಬರು
Next Article Police-barricade-at-Balarajurs-Road. ಶಿವಮೊಗ್ಗದಲ್ಲಿ ಬಂದ್‌ ಆಗಿತ್ತು ಹಲವು ರಸ್ತೆ, ವಿವಿಧೆಡೆ ಟ್ರಾಫಿಕ್‌ ಜಾಮ್‌, ಬಂದೋಬಸ್ತ್‌

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?