SHIVAMOGGA LIVE NEWS | 16 APRIL 2023
SHIMOGA : ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಕಾಂಗ್ರೆಸ್ ಕಚೇರಿ ಮುಂದೆ ಟೈರ್ಗೆ ಬೆಂಕಿ ಹಚ್ಚಿ ಹೈಕಮಾಂಡ್ ವಿರುದ್ಧ ಘೋಷಣೆ (Protest) ಕೂಗಿದರು. ಈ ವೇಳೆ ಸುಂದರೇಶ್ ಅವರು ಭಾವುಕರಾದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಹೆಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇವತ್ತು ಸುಂದರೇಶ್ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ (Protest) ಹಾಕಿದರು.
ʼಇಷ್ಟೆಲ್ಲ ಕೆಲಸ ಮಾಡಿದರೂ..ʼ
ʼಇಷ್ಟೆಲ್ಲ ಕೆಲಸ ಮಾಡಿದರೂ ನಿಮಗೆ ಟಿಕೆಟ್ ಕೈ ತಪ್ಪಿದೆ. ಸುತ್ತು ಹೋಗಿದ್ದ ಪಕ್ಷಕ್ಕೆ ಜೀವ ತುಂಬಿದ್ದೆ ನೀವು. ಈಗ ನೀವು ಕಾಂಗ್ರೆಸ್ ಕಚೇರಿಗೆ ಬರುವುದು ಬೇಡ. ವಾರ್ಡ್ಗಳಲ್ಲಿ ನಾವೂ ಕೆಲಸ ಮಾಡುದಿಲ್ಲʼ ಎಂದು ಬೆಂಬಲಿಗರು ಸಿಟ್ಟಾದರು. ಈ ವೇಳೆ ಸುಂದರೇಶ್ ಅವರು ಬೆಂಬಲಿಗರನ್ನು ಸಮಾಧಾನಪಡಿಸಲು ಮುಂದಾದರು. ಇದ್ಯಾವುದಕ್ಕೂ ಬೆಂಬಲಿಗರು ತಣ್ಣಗಾಗದಿದ್ದರಿಂದ ಸುಂದರೇಶ್ ಅವರು ಭಾವುಕರಾದರು.

ಟೈರ್ಗೆ ಬೆಂಕಿ ಹಚ್ಚಿದರು
ಇದೇ ವೇಳೆ ಆಕ್ರೋಶಗೊಂಡ ಸುಂದರೇಶ್ ಅವರ ಬೆಂಬಲಿಗರು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





