ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MARCH 2023
SHIMOGA : ಒಳ ಮೀಸಲಾತಿ ವಿರುದ್ಧ ಶಿವಮೊಗ್ಗದಲ್ಲಿಯು ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಮಲವಗೊಪ್ಪದಲ್ಲಿ ಪ್ರತಿಭಟನೆ (Protest) ನಡೆಸಿದ ಬಂಜಾರ ಸಮುದಾಯದವರು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿದರು.

ಮಲವಗೊಪ್ಪದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ (Protest) ನಡೆಸಿದರು. ಒಳ ಮಿಸಲಾತಿಯ ಶಿಫಾರಸು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವುದನ್ನು ರಾಜ್ಯ ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಗಾಡಿಕೊಪ್ಪದಲ್ಲಿಯು ಆಕ್ರೋಶ
ಇನ್ನು, ಗಾಡಿಕೊಪ್ಪದಲ್ಲಿಯು ಬಂಜಾರ ಸಮುದಾಯ ಒಳ ಮೀಸಲಾತಿ ವಿರುದ್ಧ ಪ್ರತಭಟನೆ ನಡೆಸಿತು. ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಯಿತು. ಇದೆ ವೇಳೆ ಗಾಡಿಕೊಪ್ಪದಲ್ಲಿಯು ನಮ್ಮ ತಾಂಡ, ನಮ್ಮ ರಾಜ್ಯ ಬ್ಯಾನರ್ ಕಟ್ಟಿ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಲಾಯಿತು.

ಒಳ ಮೀಸಲಾತಿ ವಿರುದ್ಧ ರಾಜ್ಯಾದ್ಯಂತ ಬಂಜಾರ ಸಮುದಾಯ ಹೋರಾಟ ನಡೆಯುತ್ತಿದೆ. ಶಿಕಾರಿಪುರದಲ್ಲಿ ನಡೆದ ಹೋರಾಟದ ವೇಳೆ ಪರಿಸ್ಥಿತಿ ತೀವ್ರ ಸ್ವರೂಪ ಪಡೆದಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ಇದನ್ನೂ ಓದಿ – ಕಲ್ಲು ತೂರಾಟ, ಈತನಕ ಎಷ್ಟು ಪ್ರಕರಣ ದಾಖಲಾಗಿದೆ? ಅರೆಸ್ಟ್ ಆದವರೆಷ್ಟು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



