SHIVAMOGGA LIVE NEWS | 4 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೇಯರ್ ಟೇಬಲ್ ಮುಂದೆ ಆಕ್ರೋಶ
ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಆಮೇಲೆ ಮೇಯರ್ ಟೇಬಲ್ ಮುಂಭಾಗ ಬಂದು ಘೋಷಣೆ ಕೂಗಿದರು. ಈ ಗದ್ದಲದ ನಡುವೆಯು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದರು.
ಭಿತ್ತ ಪತ್ರ ಹಿಡಿದು ಘೋಷಣೆ
ಕಳೆದ ಎರಡು ಅವಧಿ ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳ ಪಟ್ಟಿ ಮುದ್ರಿಸಿದ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಯಾವ ಯೋಜನೆಗಳನ್ನೂ ಜಾರಿಗೊಳಿಸಿಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ಕಾರ್ಪೊರೇಟರ್’ಗಳು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ | ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






