ಶಿವಮೊಗ್ಗ ಬಜೆಟ್ ಭಾಷಣ ಅರ್ಧಕ್ಕೆ ಕಟ್, ಸಭಾಂಗಣದಲ್ಲಿ ಘೋಷಣೆಗಳದ್ದೇ ಅಬ್ಬರ, ಗೊಂದಲಕ್ಕೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021

ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆ ವೇಳೆ ಇವತ್ತು ಗೊಂದಲ, ಗದ್ದಲ ಸೃಷ್ಟಿಯಾಯ್ತು. ಆಡಳಿತ ಮತ್ತು ವಿರೋಧ ಪಕ್ಷದ  ಕಾರ್ಪೊರೇಟರ್‍ಗಳು ಘೋಷಣೆಗಳನ್ನು ಕೂಗಿದರು. ಈ ನಡುವೆ ಬಜೆಟ್ ಪ್ರತಿಯನ್ನ ಪೂರ್ಣವಾಗಿ ಓದಲು ಸಾದ್ಯವಾಗದ ಭಾಷಣ ಅರ್ಧಕ್ಕೆ ಮೊಟಕುಗೊಂಡಿತು.

PALIKE NEWS 1 1

ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಬಜೆಟ್ ಪ್ರತಿಯನ್ನು ಓದಲು ಆರಂಭಿಸುತ್ತಿದ್ದಂತೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಆಕ್ಷೇಪ ತೆಗೆದರು. ಕಳೆದ ಬಜೆಟ್‍ಗಳಲ್ಲಿ ಘೋಷಣೆಯಾದ ಹೊಸ ಯೋಜನೆಗಳನ್ನೇ ಈತನಕ ಪೂರ್ಣಗೊಳಿಸಿಲ್ಲ, ಈಗ ಮತ್ತಷ್ಟು ಯೋಜನೆಗಳನ್ನು ಘೋಷಿಸುತ್ತಿದ್ದೀರ ಎಂದು ಪ್ರಶ್ನಿಸಿದರು.

ಗದ್ದಲ, ಗೊಂದಲ, ಟೇಬಲ್ ಮುಂದೆ ಪ್ರತಿಭಟನೆ

ಯಮುನಾ ರಂಗೇಗೌಡ ಅವರಿಗೆ ವಿರೋಧ ಪಕ್ಷದ ಇತರೆ ಕಾರ್ಪೊರೇಟರ್‍ಗಳು ಬೆಂಬಲವಾಗಿ ನಿಂತರು. ಹಿಂದಿನ ಬಜೆಟ್‍ ವೇಳೆ ಘೋಷಣೆಯಾಗಿ, ಪೂರ್ಣಗೊಳ್ಳದ ಯೋಜನೆಗಳ ಪಟ್ಟಿ ಇರುವ ಫ್ಲೇಕರ್ ಹಿಡಿದು ಘೋಷಣೆ ಕೂಗಲು ಆರಂಭಿಸಿದರು. ಮೇಯರ್ ಟೇಬಲ್ ಮುಂಭಾಗ ಪ್ರತಿಭಟಿಸಿದರು.

‘ಜೈ ಶ್ರೀರಾಮ್’, ಕಳ್ಳ ಭಕ್ತರು ಘೋಷಣೆ  

ಈ ವೇಳೆ ಬಿಜೆಪಿ ಕಾರ್ಪೊರೇಟರ್‍ಗಳು ಜೈ ಶ್ರೀರಾಮ್, ಭಾರತ್ ಮಾತಾ ಕೀ ಜೈ ಅಂತಾ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರ ಕಾರ್ಪೊರೇಟರ್‍ಗಳು ‘ಕಳ್ಳ ಭಕ್ತರು’ ಎಂದು ಘೋಷಣೆ ಮೋಳಗಿದರು. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಘೋಷಣೆಯಿಂದಾಗಿ ಪಾಲಿಕೆ ಸಭಾಂಗಣದಲ್ಲಿ ಗೊಂದಲ ನಿರ್ಮಾಣವಾಯಿತು.

ಬಜೆಟ್ ಭಾಷಣ ಅರ್ಧಕ್ಕೆ ಕಟ್

ಗೊಂದಲ, ಗದ್ದಲ, ಘೋಷಣೆಗಳಿಂದಾಗಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಪ್ರತಿಯನ್ನು ಪೂರ್ತಿಯಾಗಿ ಓದಲಿಲ್ಲ. ಅರ್ಧಕ್ಕೆ ಬಜೆಟ್ ಭಾಷಣ ನಿಲ್ಲಿಸಬೇಕಾಯಿತು. ಬಳಿಕ ಅವರೂ ತಮ್ಮ ಪಕ್ಷದವರೊಂದಿಗೆ ಸೇರಿ ಘೋಷಣೆಗಳನ್ನು ಕೂಗಿದರು.

ವಿಡಿಯೋ ರಿಪೋರ್ಟ್ ಇಲ್ಲಿದೆ


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment