ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 DECEMBER 2022
ಶಿವಮೊಗ್ಗ : ಲವ್ ಜಿಹಾದ್ (love jihad) ತಡೆಯಲು ಪ್ರತ್ಯೇಕ ಪೊಲೀಸ್ ದಳ ಸ್ಥಾಪಿಸಬೇಕು, ಹಲಾಲ್ ಪ್ರಮಾಣ ಪತ್ರ ನಿಷೇಧಿಸಬೇಕು. ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿಯೇ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರೀತಿ-ಪ್ರೇಮದ (love jihad) ಹೆಸರಿನಲ್ಲಿ ಹಿಂದು ಹೆಣ್ಣು ಮಕ್ಕಳನ್ನು ಸಿಲುಕಿಸಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಲವ್ ಜಿಹಾದ್ ಸಮಸ್ಯೆ ಹೆಚ್ಚಾಗುತ್ತಿದೆ. ಮತಾಂತರ ನಿಷೇಧ ಕಾಯಿದೆ ಇದ್ದರು ಕೆಲವು ಮುಸ್ಲಿಂ ಸಂಘಟನೆಗಳು ಇದರಲ್ಲಿ ಭಾಗಿಯಾಗಿವೆ. ಇಂತಹ ಸಂಘಟನೆಗಳ ಮೇಲೆ ಕ್ರಮ ಜರುಗಿಸಿ ನಿಷೇಧ ಮಾಡಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಲವ್ ಜಿಹಾದ್ ತಡೆಗೆ ಪೊಲೀಸ್ ದಳ ಸ್ಥಾಪನೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದನ್ನೂ ಓದಿ – 14 ರೌಡಿಗಳ ಮನೆಗಳ ಮೇಲೆ ಪೊಲೀಸರಿಂದ ದಿಢೀರ್ ದಾಳಿ
ಸಾರ್ವಜನಿಕರು ಬಳಸುವ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಅನಧಿಕೃತವಾಗಿ ಹಲಾಲ್ ಲೋಗೋ ಮುದ್ರಿಸಲಾಗುತ್ತಿದೆ. ಇದರಿಂದ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಲಾಗುತ್ತಿದೆ. ಇದೇ ಹಣ ದೇಶವಿರೋಧಿ ಚಟುವಟಿಕೆಗೆ ಉಪಯೋಗವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
ಪ್ರತಿಭಟನೆಯಲ್ಲಿ ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ವಿಜಯ ರೇವಣ್ಕರ, ವಾಗೀಶ್, ವಿಶ್ವನಾಥ್, ಮುಕುಂದ, ಪ್ರದಿಪ್, ಶೆಲ್ವಿ, ಸುಧಾ ಕಾಮತ್, ಸುನೀತಾ, ಸೀಮಾ, ಶ್ರೀಧರ್ ಮುಂತಾದವರಿದ್ದರು.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















