| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 22 NOVEMBER 2023
SHIMOGA : ವಿಮಾನ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಸ್ಥಳೀಯರು ಅಡ್ಡಿಪಡಿಸಿ, ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರ ಜೊತೆಗೆ ಮಾತಿನ ಚಕಮಕಿಯು ನಡೆಯಿತು.
ಏನಿದು ಮುಂದುವರೆದ ಕಾಮಗಾರಿ?
ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗಾಗಿ ಮುಂದುವರೆದ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಅಂದಾಜು 500 ಮೀಟರ್ನಷ್ಟು ಜಾಗವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಬಳಕೆ ಮಾಡಿಕೊಂಡಿದೆ. ಈ ಜಾಗದಲ್ಲಿ ನೈಟ್ ಲ್ಯಾಂಡಿಂಗ್ಗೆ ಅಗತ್ಯವಿರುವ ಬೀಕಾನ್ಗಳ ಅಳವಡಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇವತ್ತು ಕಾಮಗಾರಿ ಆರಂಭವಾಗುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳೀಯರ ಆಕ್ರೋಶಕ್ಕೆ ಕಾರಣವೇನು?
ಮುಂದುವರೆದ ಕಾಮಗಾರಿ ಹಿನ್ನೆಲೆ ವಿಮಾನ ನಿಲ್ದಾಣ ಕಾಂಪೌಂಡ್ ಪಕ್ಕದ ರಸ್ತೆ ಬಂದ್ ಮಾಡಲಾಗುತ್ತಿದೆ. ರಸ್ತೆಯ ಸುತ್ತಲು ಕಾಂಪೌಂಡ್ ಹಾಕಲಾಗುತ್ತಿದೆ. ಆದರೆ ಇದೇ ಮಾರ್ಗವಾಗಿ ಹೊಸ ಜೈಲು, ಸಿದ್ಧರಹಟ್ಟಿಗೆ ತೆರಳಬೇಕು. ರಸ್ತೆ ಬಂದ್ ಮಾಡಿದರೆ ಒಂದು ಕಿ.ಮೀ ಸುತ್ತಿ ಬಳಸಿ ಬರಬೇಕಿದೆ. ಆ ಮಾರ್ಗದಲ್ಲಿ ಜನ ಸಂಚಾರ ಕಡಿಮೆ. ಪುಂಡರ ಕಾಟ ಹೆಚ್ಚು. ಇದರಿಂದ ಮಹಿಳೆಯರು, ಮಕ್ಕಳು ಓಡಾಡುವುದು ಕಷ್ಟ ಮತ್ತು ಅಸುರಕ್ಷಿತ. ಹಾಗಾಗಿ ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸಬೇಕು, ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ
ಪೊಲೀಸರ ಜೊತೆಗೆ ಮಾತಿನ ಚಕಮಕಿ
ಇನ್ನು, ಪ್ರತಿಭಟನಾನಿರತನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಸ್ಥಳೀಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸುವುದು ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ ದಿನ 400 ಮಂದಿ ಪ್ರಯಾಣ, ಎಲ್ಲೆಲ್ಲಿಗೆ ಎಷ್ಟು ಜನ ತೆರಳಿದರು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()