ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪ್ರತಿಭಟನಾಕಾರರ ಆಗ್ರಹಗಳೇನು?
ಒಳ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಯಾವುದೇ ಸಮುದಾಯಕ್ಕು ಅನ್ಯಾಯವಾಗದೆ ಮೀಸಲು ನಿಗದಪಡಿಸಬೇಕು.
ಬೇಡ, ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಬಿಜೆಪಿ ಸರ್ಕಾರ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ಆ ಸಮುದಾಯವನ್ನು ನಮ್ಮ ಜೊತೆಗೆ ಸೇರಿಸಲಾಗಿದೆ.

ನಾಗಮೋಹನ ದಾಸ್ ಆಯೋಗ ನೀಡಿದ ವರದಿಯಲ್ಲಿ ಬಂಜಾರ ಸಮುದಾಯದ ಜನಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗಿದೆ. ಆಯೋಗದ ವರದಿಯಲ್ಲಿ ಸ್ಪೃಷ್ಯ ಮತ್ತು ಅಸ್ಪೃಷ್ಯ ಎಂದು ವರ್ಗೀಕರಿಸಿರುವುದು ಅವೈಜ್ಞಾನಿಕ.
ಪ್ರತಿಭಟನೆಯಲ್ಲಿ ಜಿಲ್ಲಾ ಬಂಜಾರ ಸಮಾಜದ ಪ್ರಮುಖರಾದ ಮಂಜುನಾಥ್.ಟಿ, ಶಶಿಕುಮಾರ್, ಹನುಮಂತನಾಯ್ಕ, ರೇಣುನಾಯ್ಕ, ನಾನ್ಯಾನಾಯ್ಕ, ಬಸವರಾಜ್ನಾಯ್ಕ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಏನಿದು ಪ್ರಕರಣ?
Reservation row banjara protest in Shimoga
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





