ಸಿಎಂ ಕಾರು ತಡೆದು, ಪ್ರತಿಭಟಿಸಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019

ಶಿವಮೊಗ್ಗಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರು ತಡೆದು, ಪ್ರತಿಭಟನೆ ನಡೆಸಲು ಸಜ್ಜಾಗಿದ್ದ ಕೆಲವು ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಲಾಗಿದೆ. ಸಾಗರ ರಸ್ತೆಯಲ್ಲಿರುವ ಐಬಿ ಬಳಿಕ ಘಟನೆ ನಡೆದಿದೆ.

https://www.facebook.com/liveshivamogga/videos/462356721364140/?t=3

ಬೆಳಗ್ಗೆ ಹೆಲಿಪ್ಯಾಡ್’ಗೆ ಆಗಮಿಸಿದ್ದ ಸಿಎಂ, ಕೆಲಕಾಲ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಪಿಇಎಸ್ ಕಾಲೇಜಿಗೆ ತೆರಳಬೇಕಿತ್ತು. ಈ ವೇಳೆ ಸಾಗರ ರಸ್ತೆಯಲ್ಲಿ ಗುಂಪೊಂದು ಸಿಎಂ ಕಾರು ತಡೆದು, ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿತ್ತು.

ಮುನ್ಸೂಚನೆ ಸಿಗುತ್ತಿದ್ದಂತೆ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಗ್ರಾಮಾಂತರ ಪಿಎಸ್ಐ ಮಂಜುನಾಥ ನೇತೃತ್ವದಲ್ಲಿ, ಪೊಲೀಸರು ಪ್ರತಿಭಟನೆಗೆ ಸಜ್ಜಾಗಿದ್ದ ಗುಂಪನ್ನು ಬಂಧಿಸಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆ ಕೂಗಿದ ಗುಂಪು, ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Police Arrested the protesters who planned to protest against Chief Minister Yedyurappa in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment