ಸಂಬಂಧಿಯ ತಿಥಿ ಕಾರ್ಯಕ್ಕೆ ಶಿವಮೊಗ್ಗ ನಗರಕ್ಕೆ ಬಂದಿದ್ದವರಿಗೆ ಈಗ ಕ್ವಾರಂಟೈನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತಿಥಿ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬಂದಿದ್ದವರು ಈಗ ಕ್ವಾರಂಟೈನ್‍ಗೆ ಒಳಗಾಗುವಂತೆ ಆಗಿದೆ. ನಗರದ ರವಿ ವರ್ಮ ಬೀದಿಯಲ್ಲಿ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಬಂದಿದ್ದ ಸಂಬಂಧಿಗಳು ಈಗ ಕ್ವಾಂಟೈನ್‍ಗೆ ಒಳಗಾಗಿದ್ದಾರೆ.

SHIVAMOGGA MAP GRAPHICS 1 1

ರವಿ ವರ್ಮ ಬೀದಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಕೆಲವರು ಬಂದಿರುವ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಕರೋನ ಪರೀಕ್ಷೆ ನಡೆಸಿ, ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಿದರು. ಮಂಗಳೂರಿನಿಂದ ಬಂದಿದ್ದವರು ಹೋಂ ಕ್ವಾರಂಟೈನ್ ಆಗುತ್ತೇವೆ ಎಂದು ಮನವಿ ಮಾಡಿದರು. ಆದರೆ ಸ್ಥಳೀಯರು ಇವರನ್ನು ರವಿ ವರ್ಮ ಬೀದಿಯ ಮನೆಯಲ್ಲಿ ಕ್ವಾರಂಟೈನ್ ಮಾಡಲು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಸರ್ಕಾರದ ವ್ಯವಸ್ಥೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment