ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
SHIMOGA : ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ (Highway) ವಿಳಂಬದ ಕುರಿತು ಟೀಕೆಗೆ ಸಂಸದ ರಾಘವೇಂದ್ರ ತಿರುಗೇಟು ನೀಡಿದ್ದಾರೆ. ವಿಳಂಬಕ್ಕೆ ರಾಜ್ಯ ಸರ್ಕಾರವೆ ಕಾರಣ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ನನ್ನನ್ನು ಟೀಕಿಸುತ್ತಿದ್ದಾರೆ. ಈ ಮಾರ್ಗದಲ್ಲಿ 37 ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದನ್ನು ನಡೆಸಬೇಕಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು ನೀಡಿದರು.

ನಾನು ದೆಹಲಿಯಲ್ಲಿ ಕೇಂದ್ರ ಭು ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ವಿಷಯ ತಿಳಿಸಿದ್ದೆ. ಅವರು ಸಿಎಂ ಸಿದ್ದರಾಮಯ್ಯ ಜತೆ ಮಾತನಾಡಿದ್ದಾರೆ. ಈಗ ಅಧಿಕಾರಿಗಳ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಾಜನೀಶ್ ನೇತೃತ್ವದ ಸಮಿತಿ ರಚನೆಯಾಗಿದೆ. ಸಮಿತಿ ಅಗತ್ಯ ಕ್ರಮ ಕೈಗೊಂಡು ಒಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸಲಿದೆ ಎಂದು ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಒಂದೇ ದಿನದಲ್ಲಿ ಭದ್ರಾ ಜಲಾಶಯದ ಒಳ ಹರಿವು ಭಾರಿ ಕುಸಿತ, ಇವತ್ತು ಎಷ್ಟಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





