SHIMOGA NEWS, 3 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ವಿಮಾನಯಾ ನಿರ್ದೇಶನಾಲಯ 20 ಲಕ್ಷ ರೂ. ದಂಡ ವಿಧಿಸಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಸಂಸದ ರಾಘವೇಂದ್ರ ಹೇಳಿದ್ದೇನು?
ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ವಿಷಯದಲ್ಲಿ ತಪ್ಪಾಗಿದೆ. 18 ಜನ ಅಗ್ನಿಶಾಮಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೂ ಪರಿಶೀಲನೆ ವೇಳೆ ಎಂಟು ಜನರನ್ನು ಬೇರೆ ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿದೆ. ಈ ರೀತಿ ಆಗಿರುವುದಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ರಾಘವೇಂದ್ರ ತಿಳಿಸಿದರು.

ಡಿಜಿಸಿಎ ನಿಯಮಾವಳಿವಂತೆ ಎಲ್ಲವನ್ನೂ ಜಾರಿಗೆ ತರಲಾಗುವುದು. ಡಿಜಿಸಿಎ ನಿಯಮಾವಳಿಯನ್ನು ರಾಜ್ಯ ಸರ್ಕಾರ ಪಾಲಿಸಬೇಕಿದೆ. ಅಧಿಕಾರಿಗಳ ಅನುಭವ ಕೊರತೆಯಿಂದ ದಂಡ ವಿಧಿಸಲಾಗಿದೆ. ವಿಮಾನ ನಿಲ್ದಾಣ ಉನ್ನತೀಕರಿಸಲಾಗುತ್ತಿದೆ. ಜನರ ರಕ್ಷಣೆಗಾಗಿ ವಿಮಾನ ನಿಲ್ದಾಣದ ನ್ಯೂನತೆಯನ್ನು ಸರ್ಕಾರ ಸರಿಪಡಿಸಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ, ಕಾರಣವೇನು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
