ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮೇ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಫ್ರೀಡಂ ಪಾರ್ಕ್ಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಶಿವಮೊಗ್ಗ ನಗರ, ಶಿಕಾರಿಪುರ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಗುರಿಯಾಗಿಸಿ ಕೊಂಡು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಎರಡು ದಿನ ಸಿನಿಮಾ ಟೀಮ್
ಗೀತಾ ಶಿವರಾಜಕುಮಾರ್ ಪರ ಪ್ರಚಾರಕ್ಕೆ ಏ.29 ಮತ್ತು 30ರಂದು ಸಿನಿಮಾ ತಂಡದವರು ಆಗಮಿಸಲಿದ್ದಾರೆ. ಎರಡು ದಿನ ಕಾಲ ರೋಡ್ ಶೋಗಳು, ಕಾರ್ಯಕ್ರಮಗಳು ನಡೆಯಲಿವೆ. ನಟರಾದ ದುನಿಯಾ ವಿಜ, ಡಾಲಿ ಧನಂಜಯ್, ಧೃವ ಸರ್ಜಾ, ವಿಜಯ್ ರಾಘವೇಂದ್ರ, ಚಿಕ್ಕಣ್ಣ, ಪ್ರೇಮ್, ಅನುಶ್ರೀ, ನಿಶ್ಚಿಕಾ ನಾಯ್ಡು, ನಿಧಿ ಸುಬ್ಬಯ್ಯ, ಚಂದನ್ ಶೆಟ್ಟಿ, ಅಕುಲ್ ಮತ್ತಿತರರು ಆಗಮಿಸಲಿದ್ದಾರೆ. ಬೈಂದೂರು ಆದಿಯಾಗಿ ಎಲ್ಲ ಕಡೆ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿ ಯಲ್ಲಿ 4.50 ಲಕ್ಷ ಜನರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಗಿದೆ. ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಮತ ಯಾಚನೆ ಮಾಡಲಾಗಿದೆ. ನಗರದಲ್ಲಿ ಇನ್ಮುಂದೆ ಪ್ರಚಾರ ಕೈಗೊಳ್ಳಲಾಗುವುದು. ಗೀತಾ ಅವರು ಭಾರಿ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಮುಖರಾದ ಚಂದ್ರಭೂಪಾಲ್, ಎಸ್.ಪಿ.ಶೇಷಾದ್ರಿ, ಜಿ.ಡಿ.ಮಂಜುನಾಥ್, ಚಿನ್ನಪ್ಪ, ಚಂದ್ರಶೇಖರ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















