DASARA NEWS, 12 OCTOBER 2024 : ಜೋರು ಮಳೆಯ (Rain) ನಡುವೆ ಶಿವಮೊಗ್ಗ ದಸರಾದಲ್ಲಿ ಅಂಬು ಛೇದನ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್ ಗಿರೀಶ್ ಅವರು ಅಂಬು ಛೇದನ ಮಾಡಿದರು. ಬಳಿಕ ಪಟಾಕಿ ಸಿಡಿಸಲಾಯಿತು.
ಅಂಬು ಛೇದನಬದ ಬಳಿ ಜನರು ಘೋಷಣೆ ಕೂಗಿದರು. ಪರಸ್ಪರ ಬನ್ನಿ ಹಂಚಿಕೊಂಡು ದಸರಾ ಹಬ್ಬ ಶುಭಾಶಯ ವಿನಿಮಯ ಮಾಡಿಕೊಂಡರು. ಇದೇ ವೇಳೆ ಬೃಹತ್ ರಾವಣನ ಪ್ರತಿಕೃತಿ ದಹಿಸಲಾಯಿತು.
ಬನ್ನಿ ಮಂಟಪದಲ್ಲಿ ಮಳೆಯಿಂದ ಗೊಂದಲ
ಶಿವಮೊಗ್ಗ ದಸರಾದ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಗಿದೆ. ದಿಢೀರ್ ಶುರುವಾದ ಮಳೆಯಿಂದಾಗಿ ಜನರು ಕಾರ್ಯಕ್ರಮ ಬಿಟ್ಟು ತೆರಳುವಂತಾಯಿತು. ಕೆಲವರು ಛತ್ರಿ ಹಿಡಿದು ನಿಂತು ಅಂಬು ಛೇದನ ವೀಕ್ಷಿಸಿದರು. ನಗರದ ಫ್ರೀಡಂ ಪಾರ್ಕ್ನಲ್ಲಿ ಅಂಬು ಛೇದನ ಆಯೋಜಿಸಲಾಗಿತ್ತು. ಈ ಸಂದರ್ಭ ಮಳೆಯಿಂದಾಗಿ ಜನರು ಗಲಿಬಿಲಿಗೊಂಡರು.
ಮೆರವಣಿಗೆ ವೇಳೆ ತುಂತುರು ಮಳೆ
ದಸರಾ ಮೆರವಣಿಗೆ ಜೈಲು ರಸ್ತೆಯಲ್ಲಿದ್ದಾಗ ದಟ್ಟವಾಗಿ ಮೋಡ ಕವಿದು, ತುಂತುರು ಮಳೆಯಾಗಿತ್ತು. ಕೆಲವೇ ನಿಮಿಷದಲ್ಲಿ ಮೋಡ ಸರಿದಂತಾಗಿತ್ತು. ಮಳೆ ಭೀತಿಯಿಂದಾಗಿ ಈ ಬಾರಿ ಅಂಬು ಛೇದನಕ್ಕೆ ಕಡಿಮೆ ಸಂಖ್ಯೆ ಜನ ಸೇರಿದ್ದರು.
ದಿಢೀರ್ ಮಳೆಗೆ ಜನರು ಗಲಿಬಿಲಿ
ಅಂಬು ಛೇದನ ಕಾರ್ಯಕ್ರಮ ಮುನ್ನ ದಿಢೀರ್ ಮಳೆ ಸುರಿಯಿತು. ಜೋರು ಮಳೆಯಾಗುತ್ತಿದ್ದಂತೆ ತಕ್ಷಣ ಫ್ರೀಡಂ ಪಾರ್ಕ್ನಿಂದ ಹೊರ ನಡೆದರು. ಮಳೆಯಿಂದ ರಕ್ಷಣೆಗೆ ದಸರಾ ಕಾರ್ಯಕ್ರಮದ ಪೆಂಡಾಲ್, ಅಕ್ಕಪಕ್ಕದ ಕಟ್ಟಡಗಳ ಅಡಿ, ಉತ್ಸವ ಮೂರ್ತಿಗಳ ಟ್ರಾಕ್ಟರ್ ಕೆಳಗೆ ಕುಳಿತು ಜನರು ರಕ್ಷಣೆ ಪಡೆದರು. ಕೆಲವು ಛತ್ರಿ ಹಿಡಿದು ನಿಂತು ಕಾರ್ಯಕ್ರಮ ವೀಕ್ಷಿಸಿದರು.
ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆ, ಮೆರಗು ಹೆಚ್ಚಿಸಿದ ಕಲಾ ತಂಡಗಳು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200