ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | RAIN EFFECT | 19 ಮೇ 2022
ಭಾರಿ ಮಳೆ ಹಿನ್ನೆಲೆ ಹೊಸಮನೆ ಬಡಾವಣೆ ಪುನಃ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಬೆಳಗ್ಗೆಯಿಂದ ಸುರಿದ ಮಳೆಗೆ ಹೊಸಮನೆ ಬಡಾವಣೆಯ ಕೆಲವು ಕಡೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ದಿನಸಿ ಸೇರಿದಂತೆ ಮನೆಯೊಳಗಿದ್ದ ಹಲವು ವಸ್ತುಗಳು ಪೀಠೋಪಕರಣಗಳು ಹಾನಿಯಾಗಿವೆ.
ಪಕ್ಕದ ಚಾನೆಲ್ ತುಂಬಿ ಹರಿದಿದ್ದರಿಂದ ನೀರು ಬಡಾವಣೆಗೆ ನುಗ್ಗಿದೆ. ಚರಂಡಿ ನೀರು ಕೂಡ ಸರಾಗವಾಗಿ ಮುಂದೆ ಸಾಗದೆ ಇದ್ದಿದ್ದರಿಂದ ಮನೆಗಳಿಗೆ ನುಗ್ಗಿದೆ. ಇನ್ನು ಇಲ್ಲಿನ ರಾಜಾ ಕಾಲುವೆಯಲ್ಲಿ ಹೂಳು ತೆಗೆಸದೆ ಇರುವುದು ಕೂಡ ಜಲಾವೃತವಾಗಲು ಪ್ರಮುಖ ಕಾರಣ ಎಂದು ಕಾರ್ಪೊರೇಟರ್ ರೇಖಾ ರಂಗನಾಥ್ ಆಪಾದಿಸಿದರು.
ಸ್ಥಳಕ್ಕೆ ಕಾರ್ಪೊರೇಟರ್ ದೌಡು
ಮನೆಗಳು ಮುಳುಗಡೆ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಕಾರ್ಪೊರೇಟರ್ ರೇಖಾ ರಂಗನಾಥ್, ಪತಿ ರಂಗನಾಥ್ ಅವರು ಸ್ಥಳಕ್ಕೆ ದೌಡಾಯಿಸಿದರು. ಸಂಕಷ್ಟಕ್ಕೆ ಸಿಲುಕಿದವರಿಗೆ ಕೂಡಲೆ ಊಟೋಪಚಾರದ ವ್ಯವಸ್ಥೆ ಮಾಡುವ ಭರವಸೆ ನೀಡಿದರು.
ಇನ್ನು, ಚಾನೆಲ್’ನಿಂದ ನೀರು ಹೊರಗೆ ಹರಿದು ಹೋಗದಂತೆ ತಡೆಯಲು ಮರಳಿನ ಮೂಟೆಗಳನ್ನು ಇಡಿಸಲಾಯಿತು.
ಇದನ್ನೂ ಓದಿ – ಮಳೆ ಅವಾಂತರ 4 | ಶಿವಮೊಗ್ಗ ನೂರಡಿ ರಸ್ತೆಯಲ್ಲಿ ಒಂದಡಿಗಿಂತಲು ಹೆಚ್ಚು ನೀರು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















