SHIVAMOGGA LIVE NEWS | RAIN EFFECT | 19 ಮೇ 2022
ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರವೀಂದ್ರ ನಗರ ಬಡಾವಣೆ ತತ್ತರಿಸಿ ಹೋಗಿದೆ. ರಸ್ತೆಗಳ ಮೇಲೆ ನೀರು ನಿಂತಿದ್ದು, ಜನ ಆತಂಕಕ್ಕಿಡಾಗಿದ್ದಾರೆ.
ರವೀಂದ್ರ ನಗರ ಬಡಾವಣೆಯ 1 ರಿಂದ 5ನೇ ಅಡ್ಡರಸ್ತೆವರೆಗೂ ಜಲಾವೃತವಾಗಿದೆ. ಉಷಾ ನರ್ಸಿಂಗ್ ಹೋಂ ಕಡೆಯಿಂದ ರವೀಂದ್ರ ನಗರಕ್ಕೆ ಹೋಗುವ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದೆ.
ಬಾಕ್ಸ್ ಚರಂಡಿಗೆ ನೀರು ಹೋಗುತ್ತಿಲ್ಲ
ಒಂದೆಡೆ ರಾಜೇಂದ್ರ ನಗರದಲ್ಲಿ ಚಾನೆಲ್ ತುಂಬಿ ನೀರು ಹೊರಗೆ ಹರಿಯುತ್ತಿದೆ. ಮತ್ತೊಂದೆಡೆ ಮಳೆ ನೀರು ಬಾಕ್ಸ್ ಚರಂಡಿಗೆ ಹೋಗಲಾಗದೆ ರಸ್ತೆ ಮೇಲೆ ನಿಲ್ಲುತ್ತಿದೆ. ಆದ್ದರಿಂದ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದೆ. ಪೀಠೋಪಕರಣಗಳು ಸೇರಿದಂತೆ ಹಲವು ವಸ್ತುಗಳಿಗೆ ಹಾನಿ ಉಂಟಾಗಿದೆ.
ರವೀಂದ್ರ ನಗರ ಐದು ಅಡ್ಡರೆಸ್ತಯಲ್ಲೂ ವಾಹನ ಸಂಚಾರವಿಲ್ಲ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೂ ಮಳೆ ನೀರಿನಿಂದ ಹಾನಿ ಉಂಟಾಗಿದೆ.
ಇದನ್ನೂ ಓದಿ – ಮಳೆ ಅವಾಂತರ 2 | ಗಾಂಧಿ ನಗರದ ರಸ್ತೆಗಳಲ್ಲಿ ಮೊಣಕಾಲುದ್ದ ನೀರು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200