
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಹಲವು ಕಡೆ ರಸ್ತೆಗಳು ಜಲಾವೃತವಾಗಿವೆ.

ಬಾಲರಾಜ ಅರಸ್ ರಸ್ತೆಯಿಂದ ದುರ್ಗಿಗುಡಿ ಕಡೆಗೆ ಬರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಇರುವ ರಸ್ತೆಯಲ್ಲಿ ಚರಂಡಿ ತುಂಬಿ ಹರಿದಿದೆ. ಇದರಿಂದ ರಸ್ತೆ ಸಂಪುರ್ಣವಾಗಿ ಜಲವೃತವಾಗಿತ್ತು. ಮಳೆ ನಿಂತು ನೀರು ಸರಾಗವಾಗಿ ಹರಿದು ಹೋಗುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು.

ಆರ್ಎಂಎಲ್ ನಗರ ಸೇರಿದಂತೆ ನಗರದ ವಿವಿಧೆಡೆ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.
ಇವತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತು ಜೋರು ಮಳೆಯಾಗಿದೆ. ಕಳೆದೆರಡು ದಿನದಿಂದ ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಸುರಿಯುತ್ತಿದೆ.

ರೈತರಲ್ಲಿ ಆತಂಕ
ಜೋರು ಮತ್ತು ನಿರಂತರ ಮಳೆಯಾಗುತ್ತಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ಜೋಳ, ಹತ್ತಿ, ಶುಂಠಿ, ಅಡಿಕೆ ಬೆಳೆ ಹಾನಿಯಾಗುವ ಆತಂಕವಿದೆ. ಇದು ರೈತರನ್ನು ಕಂಗೆಡಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






