ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳು, ಕಟ್ಟಡಗಳಿಗೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
ವಾಯುಭಾರ ಕುಸಿತದಿಂದಾಗಿ ಅಕಾಲಿಕ ಮಳೆಯಾಗುತ್ತಿದೆ. ರಾತ್ರಿ ಭಾರಿ ಮಳೆಯಾಗಿದ್ದು, ಹಲವು ಕಡೆ ಚರಂಡಿ ನೀರು ಮನೆಯೊಳಗೆ ನುಗ್ಗಿದೆ. ಜನರು ನಿದ್ರೆ ಬಿಟ್ಟು, ನೀರು ಹೊರಗೆ ಹಾಕುತ್ತ ರಾತ್ರಿ ಕಳೆಯುವಂತಾಗಿದೆ. ಹೊಸಮನೆ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ.
ಗೃಹೋಪಯೋಗಿ ವಸ್ತುಗಳು ನೀರಿನಿಂದಾಗಿ ಹಾಳಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಪಾಲಿಕೆ ಕಾರ್ಪೊರೇಟರ್ ರೇಖಾ ರಂಗನಾಥ್ ಅವರು ಮನೆಗಳಿಗೆ ಭೇಟಿ ನೀಡಿದ್ದರು. ರಾಜಕಾಲುವೆ ತುಂಬಿ ನೀರು ಹೊರಗೆ ಹರಿದಿದ್ದರಿಂದ ಸಮಸ್ಯೆಯಾಗಿದೆ. ಕೂಡಲೆ ಈ ಸಮಸ್ಯೆ ಬಗೆಹರಿಸುವಂತೆ ಕಾರ್ಪೊರೇಟರ್ ರೇಖಾ ರಂಗನಾಥ್ ಅವರು ಅಧಿಕಾರಿಗಳು ಮತ್ತು ಮೇಯರ್ ಅವರಿಗೆ ಮನವಿ ಮಾಡಿದರು.
ವಿವಿಧೆಡೆ ಭಾರಿ ಮಳೆ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾದ ವರದಿಯಾಗಿದೆ. ಹೊಸನಗರ, ತೀರ್ಥಹಳ್ಳಿಯ ಹಲವು ಕಡೆ ಭಾರಿ ಮಳೆಯಾದ ವರದಿಯಾಗಿದೆ. ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಭತ್ತದ ಬೆಳೆ, ಅಡಕೆಗೆ ಹಾನಿಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200