ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019
ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರ ಬೆಳಿಗ್ಗೆ 10 ಗಂಟೆಗೆ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಎನ್.ಡಿ. ಸುಂದರೇಶ್ ಅವರು ರೈತ ಸಂಘದ ಸಂಸ್ಥಾಪಕರು. ರೈತರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಸ್ವಾಭಿಮಾನ ತುಂಬಿದವರು. ಶೋಷಣೆ ವಿರುದ್ಧ ಹೋರಾ ಡಿದವರು. ಯುವಕರನ್ನು ಸಂಘಟಿಸಿದವರು. ರೈತರ ಬದುಕಿಗೆ ನ್ಯಾಯ ಸಿಗಬೇಕು ಎಂದು ಹೋರಾಡಿದವರು. ರೈತರ ಕಣ್ಮಣಿಯಾದ ಸುಂದರೇಶ್ ಅವರ ನೆನಪಿನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುಂದರೇಶ್ ಅವರ ನೆನಪಿನ ಜೊತೆಗೆ ರೈತರಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡಿ ಪೊಲೀಸರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಸುಮಾರು 153 ರೈತರನ್ನು ನೆನಪು ಮಾಡಿಕೊಂಡು ಅವರು ಬಿಟ್ಟುಹೋದ ಹೋರಾಟವನ್ನು ಮುಂದುವರೆಸಬೇಕಾಗಿದೆ. ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂದರು.
ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಕೆ.ರಾಘವೇಂದ್ರ, ಈಶಣ್ಣ, ಜಗದೀಶ್, ಶಿವಮೂರ್ತಿ, ಪಂಚಾಕ್ಷರಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Raitha Sanga and Hasiru Sene to hola meeting Shimoga DCC Bank Hall on account of N D Sundaresh’s Birthday, said HR Basavarajappa