SHIVAMOGGA LIVE NEWS | 15 ಮಾರ್ಚ್ 2022
ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.
ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿನಿಯರೊಂದಿಗೆ ಸಂವಾದ
ಈ ಸಂದರ್ಭ ಕುಲಸಚಿವೆ ಜಿ.ಅನುರಾಧ ಅವರು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿದರು. ಅವರ ಕುಂದು ಕೊರತೆಗಳನ್ನು ಆಲಿಸಿದರು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಕುಲಸಚಿವರು, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವುದು, ಹಾಸ್ಟೆಲ್ ನ ಶುಚಿತ್ವ ಕಾಪಾಡುವುದು, ಮತ್ತಿತರ ಸಮಸ್ಯೆಗಳಿಗೆ ಸಮಿತಿಯ ಮೂಲಕ ತಕ್ಷಣವೆ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಇನ್ನು, ಪ್ರತ್ಯೇಕ ಆಹಾರ ನಿಲಯದ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳಿದ್ದರೆ ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸುವಂತೆ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ.ವಾಗ್ದೇವಿ, ಡಾ.ವೀಣಾ, ಡಾ.ರಮೇಶ್ ಬಾಬು, ಡಾ. ರಾಜೇಶ್ವರಿ ಉಪಸ್ಥಿತರಿದ್ದರು.
ಇದನ್ನೂ ಓದಿ | ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200