ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ನಡೆಸುತ್ತಿರುವ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಜೂನ್‌ 28ರಂದು ದಾವಣಗೆರೆ ನಗರ ಬಂದ್‌ (Bandh) ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಶಿವಮೊಗ್ಗದ ಡಿ.ಎ.ಆರ್‌ ಮೈದಾನದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಲದಂಡೆ ನಾಲೆಯಲ್ಲಿ ಕಾಮಗಾರಿ ನಡೆಸುತ್ತಿರುವುರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾ ಜಲಾಶಯದ ಮುಂಭಾಗ ಹೋರಾಟ ನಡೆಸಿದೆವು. ಬುಧವಾರ ಬೆಳಗ್ಗೆ ದಾವಣಗೆರೆಯ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

Former-Minister-MP-Renukacharya-at-Shimoga-DAR-Police-ground

ಶನಿವಾರ ದಾವಣಗೆರೆ ನಗರ ಬಂದ್‌ ಆಚರಿಸಲಾಗುತ್ತದೆ. ವರ್ತಕರು ಇದಕ್ಕೆ ಸಹಕಾರ ನೀಡಬೇಕು. ರೈತರು ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಇನ್ನು, ಭದ್ರಾ ಬಲದಂಡೆ ನಾಲೆಯಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಮುತ್ತಿಗೆ ಹಾಕಲು ದಾವಣಗೆರೆ ರೈತರು ಯತ್ನಿಸಿದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ರೈತರನ್ನು ಪೊಲೀಸರು ವಶಕ್ಕೆ ಪಡೆದು, ಶಿವಮೊಗ್ಗದ ಡಿ.ಎ.ಆರ್‌ ಮೈದಾನಕ್ಕೆ ಕರೆತಂದಿದ್ದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment