ಕೃಷ್ಣನನ್ನು ಹುಡುಕಿಕೊಟ್ಟರೆ ನಗದು ಬಹುಮಾನ | ಈಡಿಗರ ಸಂಘದಿಂದ ಸಚಿವರು, ಶಾಸಕರಿಗೆ ಸನ್ಮಾನ | TOP 3 NEWS

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷ್ಣನ ಬಗ್ಗೆ ಮಾಹಿತಿ ಕೊಟ್ಟರೆ ನಗದು ಬಹುಮಾನ

FATAFAT-NEWS-1SHIMOGA : ಗೋಪಾಲಗೌಡ ಬಡಾವಣೆಯಿಂದ ಬಿಳಿ ಬಣ್ಣದ ಕೋಕ್ಟೇಲ್‌ ಪಕ್ಷಿ ಕಾಣೆಯಾಗಿದೆ. ಈ ಪಕ್ಷಿ ಬಿಳಿ ಗಿಳಿಯ ರೀತಿ ಕಾಣುತ್ತೆ. ಇಲ್ಲಿನ ಮೋರ್‌ ಸೂಪರ್‌ ಮಾರ್ಕೆಟ್‌ ಬಳಿಯಿಂದ ಕಣ್ಮರೆಯಾಗಿದೆ. ಮಾಲೀಕರು ಇದಕ್ಕೆ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷಿ ಕಂಡಲ್ಲಿ ತಕ್ಷಣ ಮಾಹಿತಿ ನೀಡುವಂತೆ ಮಾಲೀಕರು ಮನವಿ ಮಾಡಿದ್ದಾರೆ. ಮಾಹಿತಿ ನೀಡಿದವರಿಗೆ ಸೂಕ್ತ ನಗದು ಬಹುಮಾನ ಘೋಷಿಸಿದ್ದಾರೆ. ಸಂಪರ್ಕಿಸಿ : 9886687209, 9108399502.

ಇದನ್ನೂ ಓದಿ- ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

ನೂತನ ಸಚಿವರು, ಶಾಸಕರಿಗೆ ಸನ್ಮಾನ

FATAFAT-NEWS-2SAGARA : ಪ್ರಾಂತ್ಯ ಆರ್ಯ ಈಡಿಗರ ಸಂಘದಿಂದ ಆ.27ರಂದು ಬೆಳಗ್ಗೆ 11ಕ್ಕೆ ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಮುದಾಯ ಭವನದಲ್ಲಿ ಸಮಾಜದ ನೂತನ ಶಾಸಕರು ಮತ್ತು ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಟಿ.ವಿ.ಪಾಂಡುರಂಗ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ಟಿ.ನಾಯ್ಕ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರೂ ಆದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಹಿಸಲಿದ್ದಾರೆ. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಬಾಲಕ, ಬಾಲಕಿಯರಿಗೆ ಫುಟ್ಬಾಲ್‌, ಹಾಕಿ ಆಯ್ಕೆ

FATAFAT-NEWS-2SHIMOGA : ಶಾಲಾ ಶಿಕ್ಷಣ ಇಲಾಖೆಯು ಆ.29 ಹಾಗೂ 30ರಂದು 14 ರಿಂದ 17 ವರ್ಷದೊಳಗಿನ ಬಾಲಕ, ಬಾಲಕಿಯರ ಫುಟ್ಬಾಲ್, ಹಾಕಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೆಕ್ರೆಡ್ ಹಾರ್ಟ್ ಪ್ರೌಢಶಾಲೆ ಆವರಣದಲ್ಲಿ ಫುಟ್ಬಾಲ್, ನೆಹರು ಮೈದಾನದಲ್ಲಿ ಹಾಕಿ ತಂಡಕ್ಕೆ ಆಯ್ಕೆ ನಡೆಯಲಿದೆ. ಆಸಕ್ತರು ಆ ದಿನ ಆಯ್ಕೆಗೆ ಹಾಜರಾಗಬಹುದು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment