SHIMOGA : ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿತೆರೆಯಲು (Liquor store) ಅನುಮತಿ ನೀಡಬಾರದು ಎಂದು ಆಗ್ರಹಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು. ಶಾಲೆ ತೆಗೆಯಲು ಅನುಮತಿ ನೀಡದೆ ಮದ್ಯದಂಗಡಿ ಆರಂಭಿಸಲು ಅವಕಾಶ ಕಲ್ಪಿಸಿದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗೋಪಾಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ (Liquor store) ತೆಗೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಮದ್ಯದಂಗಡಿ ಸ್ಥಳದ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ, ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗೋಪಾಲಗೌಡ ಬಡಾವಣೆಯಲ್ಲಿ ಶಾಲೆ ಆರಂಭಕ್ಕೆ ಅನುಮತಿ ಕೇಳಿದ್ದೆವು. ಆದರೆ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿತ್ತು. ಈಗ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಇಲ್ಲಿಂದ 300 ಮೀಟರ್ ದೂರದಲ್ಲಿ ಒಂದು ಮದ್ಯದಂಗಡಿ ಇದೆ. ಹಾಗಿದ್ದು ಮತ್ತೊಂದು ಮದ್ಯದಂಗಡಿ ಆರಂಭಿಸಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ಈ ರಸ್ತೆ ಮದ್ಯದಂಡಿಯ ರಸ್ತೆಯಾಗಲಿದೆ.ಹೆಚ್.ಎಂ.ಸತ್ಯನಾರಾಯಣ, ಅಧ್ಯಕ್ಷ, ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ
ಸಮಾಜವಾದಿ, ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಟ್ಟ ಶಾಂತವೇರಿ ಗೋಪಾಲಗೌಡ ಅವರ ಹೆಸರಿನ ಬಡಾವಣೆ ಇದು. ಇಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ಅನುಮತಿ ನಿರಾಕರಿಸಲಾಗಿದೆ. ಮದ್ಯದಂಗಡಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇವತ್ತಿನದ್ದು ಸಾಂಕೇತಿಕ ಹೋರಾಟ. ಅಧಿಕಾರಿಗಳು ನಿರ್ಧಾರ ಬದಲಿಸದೆ ಇದ್ದರೆ, ಮುಂದೆ ಇಡೀ ಬಡಾವಣೆ ನಿವಾಸಿಗಳು ಹೋರಾಟ ನಡೆಸುತ್ತೇವೆ.ಡಾ. ಶ್ರೀನಿವಾಸ್, ಅಧ್ಯಕ್ಷ, ವನಸಿರಿ ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ