SHIVAMOGGA LIVE NEWS | 20 JANUARY 2023
SHIMOGA : ಮತದಾನ ಕೇಂದ್ರ ಬದಲಾವಣೆ (voting booth) ಮಾಡದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಸ್ವಾಮಿ ವಿವೇಕಾನಂದ ಬಡಾವಣೆಯ ಸೌಹಾರ್ದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯರು, ಸ್ವಾಮಿ ವಿವೇಕಾನಂದ ಬಡಾವಣೆಯ ಇ, ಸಿ, ಡಿ, ಬ್ಲಾಕ್ ಗಳ ವ್ಯಾಪ್ತಿ ವಾಸ್ತವವಾಗಿ ಮಹಾನಗರ ಪಾಲಿಕೆಯ 17ನೇ ವಾರ್ಡ್ಗೆ ಸೇರುತ್ತದೆ. ಆದರೆ ಈ ವಾರ್ಡ್ನ ಮತದಾರರನ್ನು 6ನೇ ವಾರ್ಡ್ ಗಾಡಿಕೊಪ್ಪಕ್ಕೆ ಸೇರಿಸಲಾಗಿದೆ. ನಮ್ಮ ವಾರ್ಡ್ನ ಮತದಾರರನ್ನು ಗಾಡಿಕೊಪ್ಪ ವಾರ್ಡ್ಗೆ ಸೇರಿಸಿರುವುದರಿಂದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಮತದಾನ ಮಾಡಲು ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ನಮ್ಮ ವಾರ್ಡ್ನಿಂದ ದೂರದ 6ನೇ ವಾರ್ಡ್ಗೆ ಹೋಗುವುದನ್ನು ತಪ್ಪಿಸಿ. ಎಲ್ಲಾ ಮತಗಳನ್ನು 17ನೇ ವಾರ್ಡ್ಗೆ ಸೇರಿಸಬೇಕು. ಪಕ್ಕದಲ್ಲೇ ಇರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೂತನ ಬೂತ್ (voting booth) ಸ್ಥಾಪಿಸಬೇಕು. ಈ ಮೂಲಕ ಮತದಾರರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?
ಸಂಘದ ಅಧ್ಯಕ್ಷ ಎಸ್.ಬಿ. ರಾಮಪ್ಪ ಗೌಡ, ಹೆಚ್.ಪಿ. ರಮೇಶ್, ಸಮಿತಿ ಸದಸ್ಯರಾದ ವಿ.ಟಿ.ಅರುಣ್, ಎಸ್.ಜಿ. ನಾಯಕ್, ಕೃಷ್ಣಮೂರ್ತಿ, ಕಿರಣ್ ಇದ್ದರು.