SHIVAMOGGA LIVE NEWS, 18 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ವತಿಯಿಂದ ನಡೆಸಲಾಗುತ್ತಿರುವ ಮುಷ್ಟಿ ಅಕ್ಕಿ (Rice) ಸಂಗ್ರಹ ಅಭಿಯಾನಕ್ಕೆ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಯಾನಕ್ಕೆ ಚಾಲನೆ ನೀಡಿದರು.
ಪಾಪ ಕರ್ಮಗಳು ದೂರಾಗಬೇಕಿದ್ದರೆ ದಾನ ಮಾಡಬೇಕು. ಅನ್ನದಾನ ಅತ್ಯಂತ ಶ್ರೇಷ್ಠವಾದ್ದದ್ದು. ಇದು ಹಸಿವನ್ನು ನೀಗಿಸುವ ಶ್ರೇಷ್ಠ ಕಾರ್ಯ. ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ ಯಶಸ್ವಿಯಾಗಲಿ.
ಶ್ರೀ ಸಾಯಿನಾಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠ
![]()

ಕಳೆದ ನಾಲ್ಕು ವರ್ಷದಿಂದ ಅಭಿಯಾನ ನಡೆಯುತ್ತಿದೆ. ಎರಡು ಲಾರಿಯಷ್ಟು ಅಕ್ಕಿ ಮತ್ತು ಇತರೆ ಸಾಮಗ್ರಿ ಸಂಗ್ರಹವಾಗುತ್ತಿತ್ತು. ಎರಡೂ ಲಾರಿಯನ್ನು ಶಬರಿಮಲೈಗೆ ಕಳುಹಿಸುತ್ತಿದ್ದೆವು. ಈ ಬಾರಿ ಒಂದು ಲಾರಿಯಷ್ಟು ಸಾಮಗ್ರಿಯನ್ನು ಶಬರಿಮಲೈಗೆ, ಇನೊಂದು ಲಾರಿಯಷ್ಟು ಸಾಮಗ್ರಿಯನ್ನು ಶಿವಮೊಗ್ಗದ ಭಕ್ತರ ಅನುಕೂಲಕ್ಕೆ ಉಪಯೋಗಿಸಲಾಗುತ್ತದೆ.
ಕೆ.ಇ.ಕಾಂತೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
![]()

ಶಬರಿಮಲೈ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಅನ್ನದಾನ ಮಾಡುವ ಉದ್ದೇಶದಿಂದ ಶಿವಮೊಗ್ಗದ ಪ್ರತಿ ಮನೆಯಿಂದ ಒ೦ದು ಮುಷ್ಟಿ ಅಕ್ಕಿ ಸಂಗ್ರಹಿಸುವುದು ಅಭಿಯಾನದ ಉದ್ದೇಶ. ಇವತ್ತು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಶ್ರೀ ಸಾಯಿನಾಥ ಸ್ವಾಮೀಜಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್, ವಿಶ್ವಾಸ್, ಮಂಜುನಾಥ್ ಸೇರಿದಂತೆ ಹಲವರು ಮನೆ ಮನೆಗಳಿಂದ ಮುಷ್ಟಿ ಅಕ್ಕಿ ಸಂಗ್ರಹಿಸಿದರು.
ಇದನ್ನೂ ಓದಿ » ಹೊಳಲೂರು ಬಳಿ ಕರಡಿ ಪ್ರತ್ಯಕ್ಷ, ವಿಡಿಯೋ ವೈರಲ್, ಜನರಲ್ಲಿ ಭೀತಿ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





